ಮುಖ್ಯಮಂತ್ರಿ ಕುಮಾರಸ್ವಾಮಿ ಪೇಪರ್ ಟೈಗರ್: ಸಿ.ಟಿ.ರವಿ
Team Udayavani, Nov 5, 2018, 6:05 AM IST
ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕ್ನಲ್ಲಿರುವ ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೇಪರ್ ಟೈಗರ್ ಆಗಿದ್ದಾರೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾದ ಕುರಿತು ಸರಕಾರ ಬ್ಯಾಂಕ್ಗಳಿಗೆ ಆದೇಶ ನೀಡಲಿ. ಕೇವಲ ಸಾಲಮನ್ನಾ ಮಾಡುತ್ತೇವೆಂದು ಪತ್ರಿಕಾ ಹೇಳಿಕೆ ನೀಡಿದರೆ ಬ್ಯಾಂಕ್ನವರು ಸುಮ್ಮನಿರುತ್ತಾರಾ? ಆದೇಶ ಹೊರಡಿಸುವವರೆಗೂ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್ ನೀಡುತ್ತಾರೆ ಎಂದು ತಿಳಿಸಿದರು.
ರೈತರ ಸಾಲವನ್ನು ಸರ್ಕಾರವೇ ಪಾವತಿ ಮಾಡಲಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಯಿಂದ ಆದೇಶ ಹೊರಡಿಸಬೇಕು. ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದರೆ ಬ್ಯಾಂಕ್ನವರು ಯಾಕೆ ನೋಟಿಸ್ ನೀಡುತ್ತಾರೆ ಎಂದು ಪ್ರಶ್ನಿಸಿದರು. ರೈತರ ಸಾಲಕ್ಕೆ ಸರ್ಕಾರವೇ ಜವಾಬ್ದಾರಿ ಎಂದು ಬ್ಯಾಂಕ್ಗೆ ಸರ್ಕಾರವೇ ಹೇಳಬೇಕು. ಸರ್ಕಾರ ಬರಿ ಪೇಪರ್ ಹೇಳಿಕೆ ನೀಡಿದರೆ ಸಾಲದು, ರೈತರ ಸಾಲಮನ್ನಾ ಮಾಡಬೇಕು ಎಂಬುದು ನಮ್ಮ ಆಗ್ರಹ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ