ಹೊರ ಬಿತ್ತುಜಿಪಂ- ತಾಪಂ ಸ್ಥಾನಗಳ ಮೀಸಲಾತಿ


Team Udayavani, May 2, 2021, 6:49 PM IST

25-13

ಚಿಕ್ಕಮಗಳೂರು: ರಾಜ್ಯ ಚುನಾವಣಾ ಆಯೋಗ ಈ ಹಿಂದೆ ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿ ಕರಡು ಪ್ರತಿಯನ್ನು ಹೊರಡಿಸಿತ್ತು. ಸದ್ಯ ಈ ಕ್ಷೇತ್ರಗಳ ಮೀಸಲಾತಿಯನ್ನು ಪ್ರಕಟಿಸಿ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆ ಭೌಗೋಳಿಕವಾಗಿ ವಿಸ್ತಾರವಾಗಿದ್ದು, ಮಲೆನಾಡು ಮತ್ತು ಬಯಲು ಸೀಮೆ ಪ್ರದೇಶವನ್ನು ಒಳಗೊಂಡಿದೆ.

ತಾಪಂ ವ್ಯಾಪ್ತಿಯಲ್ಲಿ 96 ಕ್ಷೇತ್ರಗಳನ್ನು ಹೊಂದಿದ್ದರೆ, ಜಿಪಂ ವ್ಯಾಪ್ತಿಯಲ್ಲಿ 33 ಕ್ಷೇತ್ರಗಳನ್ನು ಒಳಗೊಂಡಿದೆ. ಚಿಕ್ಕಮಗಳೂರು ತಾಪಂ ವ್ಯಾಪ್ತಿಯ 15 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮೀಸಲಿಟ್ಟಿದ್ದು, ಮೂಡಿಗೆರೆಯ ತಾಪಂ ವ್ಯಾಪ್ತಿಯ 10 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಕೊಪ್ಪ ತಾಲೂಕಿನ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಶೃಂಗೇರಿ ತಾಲೂಕಿನ 11ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ನರಸಿಂಹರಾಜಪುರ ತಾಲೂಕಿನ 11ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಕಡೂರು ತಾಲೂಕಿನ 18 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಮೀಸಲಿರಿಸಲಾಗಿದೆ.

ತರೀಕೆರೆಯ 9 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಅಜ್ಜಂಪುರ ತಾಲೂಕಿನ 11 ಸ್ಥಾನಗಳ ಪೈಕಿ 6 ಸ್ಥಾನಗಳನ್ನು ಮೀಸಲಿಡಲಾಗಿದೆ. ಜಿಪಂ 33 ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದವರಿಗೆ ಮೀಸಲಿರಿಸಿದ್ದು, ಕ್ಷೇತ್ರಗಳ ಮೀಸಲಾತಿ ವಿವರ ಇಂತಿದೆ. ತಾಪಂ: ಚಿಕ್ಕಮಗಳೂರು ತಾಲೂಕು 15 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಪರಿಶಿಷ್ಟ ಜಾತಿಗೆ 4 ಸ್ಥಾನಲಿಟ್ಟಿದೆ. ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡದ ಮಹಿಳೆಗೆ 1 ಸ್ಥಾನ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ)ಗೆ 2 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲೊಂದು ಮಹಿಳೆ, ಸಾಮಾನ್ಯ ವರ್ಗಕ್ಕೆ 8 ಸ್ಥಾನ ಮೀಸಲಿಟ್ಟಿದ್ದು ಅದರಲ್ಲಿ 4 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ 10 ಸ್ಥಾನಗಳನ್ನು ಒಳಗೊಂಡಿದ್ದು, 5 ಸ್ಥಾನಗಳನ್ನು ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಅದರಲ್ಲಿ 2 ಮಹಿಳೆಯರಿಗೆ, ಪರಿಶಿಷ್ಟ ಪಂಗಡದಲ್ಲಿ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ.

ಹಿಂದುಳಿದ ವರ್ಗ(ಎ) 1 ಸ್ಥಾನ ಪುರುಷರಿಗೆ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 5 ಸ್ಥಾನ ಮೀಸಲಿಟ್ಟಿದ್ದು ಅದರಲ್ಲಿ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಕೊಪ್ಪ ತಾಲೂಕು ವ್ಯಾಪ್ತಿಯಲ್ಲಿ 11 ಸ್ಥಾನಗಳ ಪೈಕಿ 6 ಸ್ಥಾನಗಳನ್ನು ಮೀಸಲಿಟ್ಟಿದ್ದು, ಪರಿಶಿಷ್ಟ ಜಾತಿಗೆ 1 ಸ್ಥಾನ, ಪುರುಷರಿಗೆ 1 ಸ್ಥಾನ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡದ 1ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ. ಹಿಂದುಳಿವರ್ಗ(ಎ)ಗೆ 1ಸ್ಥಾನ ಪುರುಷರಿಗೆ 1ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 6 ಸ್ಥಾನಗಳನ್ನು ಮೀಸಲಿಟ್ಟಿದ್ದು ಅದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ.

ಶೃಂಗೇರಿ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಪರಿಶಿಷ್ಟ ಜಾತಿಗೆ 1 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ) 2 ಸ್ಥಾನ ಮಹಿಳೆಯರಿಗೆ ಮೀಸಲು, ಹಿಂದುಳಿದ ವರ್ಗ(ಬಿ) 1ಸ್ಥಾನ ಪುರುಷರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 6 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ನರಸಿಂಹರಾಜಪುರ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮೀಸಲಿಡಲಾಗಿದ್ದು ಪರಿಶಿಷ್ಟ ಜಾತಿ 1 ಸ್ಥಾನ ಪುರುಷರಿಗೆ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಗೆ ಮೀಸಲಿಡಲಾಗಿದೆ.

ಹಿಂದುಳಿದ ವರ್ಗ(ಎ)ಗೆ 1 ಸ್ಥಾನ ಪುರುಷ 1ಸ್ಥಾನ ಮಹಿಳೆಗೆ ಮೀಸಲು. ಸಾಮಾನ್ಯ ವರ್ಗಕ್ಕೆ 6 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಕಡೂರು ತಾಲೂಕು ವ್ಯಾಪ್ತಿಯಲ್ಲಿ ಬರುವ 18 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 3 ಸ್ಥಾನ ಮೀಸಲಿಟ್ಟಿದ್ದು, ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು, ಪರಿಶಿಷ rಪಂಗಡ 1ಸ್ಥಾನ ಮಹಿಳೆಗೆ ಮೀಸಲು, ಹಿಂದುಳಿದ ವರ್ಗ(ಎ) 3 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ, ಹಿಂದುಳಿದ ವರ್ಗ(ಬಿ) 1ಸ್ಥಾನ ಪುರುಷರಿಗೆ ಮೀಸಲು, ಸಾಮಾನ್ಯ ವರ್ಗಕ್ಕೆ 9 ಸ್ಥಾನಗಳನ್ನು ಮೀಸಲಿಟ್ಟಿದ್ದು 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ತರೀಕೆರೆ ತಾಲೂಕು ವ್ಯಾಪ್ತಿಯ 9 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡ 1 ಸ್ಥಾನ ಮಹಿಳೆಯರಿಗೆ. ಸಾಮಾನ್ಯ ವರ್ಗಕ್ಕೆ 5 ಸ್ಥಾನ ಮೀಸಲಿಟ್ಟಿದು,ª ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಅಜ್ಜಂಪುರ ತಾಲೂಕು ವ್ಯಾಪ್ತಿಯ 11 ಸ್ಥಾನಗಳಲ್ಲಿ 6 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 1ಸ್ಥಾನ ಮಹಿಳೆ 1ಸ್ಥಾನ ಪುರುಷರಿಗೆ, ಪರಿಶಿಷ್ಟ ಪಂಗಡ 1ಸ್ಥಾನ ಮಹಿಳೆಯರಿಗೆ, ಹಿಂದುಳಿವರ್ಗ(ಎ) 1ಸ್ಥಾನ ಮಹಿಳೆ, 1ಸ್ಥಾನ ಪುರುಷರಿಗೆ ಸಾಮಾನ್ಯ ವರ್ಗಕ್ಕೆ 6 ಸ್ಥಾನಗಳನ್ನು ಮೀಸಲಿಟ್ಟಿದ್ದು 3 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

ಜಿಲ್ಲಾ ಪಂಚಾಯತ್‌: ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್‌ 33 ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ 8 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 4 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಹಿಂದುಳಿದ ವರ್ಗ(ಎ) 6 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 3 ಸ್ಥಾನಗಳನ್ನು ಮಹಿಳೆಯರಿಗೆ, ಹಿಂದುಳಿದ ವರ್ಗ(ಬಿ) 1 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ. ಸಾಮಾನ್ಯ ವರ್ಗಕ್ಕೆ 17 ಸ್ಥಾನಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ 8 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.