ಚಿಕ್ಕಮಗಳೂರು: ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೆಡಿಗಳು; ಶಾಂತಿ ಕದಡುವ ಯತ್ನ
Team Udayavani, Dec 17, 2019, 11:02 AM IST
ಚಿಕ್ಕಮಗಳೂರು: ನಗರದ ಹಲವೆಡೆ ಬೈಕ್ ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಶಾಂತಿ ಕದಡುವ ಪ್ರಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ನಗರದ ಮಾರ್ಕೆಟ್ ರಸ್ತೆ, ಪೇನ್ಶನ್ ಮಹಲ್, ಶಾದಿ ಮಹಲ್, ಗೌರಿ ಕಾಲುವೆ ಬಳಿ ಘಟನೆ ನಡೆದಿದ್ದು, ಕಿಡಿಗೇಡಿಗಳ ಈ ದುಷ್ಕೃತ್ಯದಿಂದ ಐದು ಬೈಕ್ ಸುಟ್ಟು ಕರಕಲಾಗಿದೆ.
ನಗರದ ಪ್ರಮುಖ ರಸ್ತೆ ಹಾಗೂ ಮನೆ ಎದುರು ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಚಿಕ್ಕಮಗಳೂರು ನಗರದಲ್ಲೆಡೆ ಆತಂಕ ಮನೆ ಮಾಡಿದೆ.
ಸ್ಥಳಗಳಿಗೆ ಎಸ್ಪಿ ಹರೀಶ್ ಪಾಂಡೆ, ಎಎಸ್ ಪಿ ಶೃತಿ ಭೇಟಿ ಪರಿಶೀಲನೆ ನಡೆಸಿದರು. ಕಿಡಿಗೆಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಬೆಳ್ಳಂಬೆಳಿಗ್ಗೆ ಪೊಲೀಸ್ ತಂಡಗಳು ನಗರದಲ್ಲಿ ಗಸ್ತು ತಿರುಗಿದವು.
ಚಿಕ್ಕಮಗಳೂರು ನಗರ ಠಾಣೆ ಹಾಗೂ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ