Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!


Team Udayavani, Mar 27, 2024, 3:28 PM IST

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವುದರ ಜತೆಗೆ ತಾವು ಇಬ್ಬರು ಸೋತ ಬಳಿಕ ನಾನೊಂದು ತೀರ ನೀನೊಂದು ತೀರ ಎನ್ನುವಂಹತೆ ಇದ್ದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್‌ ಹಾಗೂ ಡಾ.ಕೆ.ಸುಧಾಕರ್‌ ಸಂಬಂಧ ಇದೀಗ ಮತ್ತೆ ಚಿಗುರೊಡೆದಿದೆ.

ಹೌದು, ಲೋಕಸಭಾ ಚುನಾವಣೆಗೆ ಡಾ.ಕೆ.ಸುಧಾಕರ್‌ ಪಕ್ಷದೊಳಗಿನ ಪ್ರಬಲ ವಿರೋಧದ ನಡುವೆಯು ಬಿಜೆಪಿ ಟಿಕೆಟ್‌ ದಕ್ಕಿಸಿಕೊಳ್ಳುತ್ತಿದ್ದಂತೆ ಹೊಸಕೋಟೆ ಮಾಜಿ ಸಚಿವರಾದ ಹಾಲಿ ವಿಧಾನ ಪರಿಷತ್ತು ಸದಸ್ಯ ಎಂಟಿಬಿ ನಾಗರಾಜ್‌ ಡಾ.ಕೆ.ಸುಧಾಕರ್‌ಗೆ ಜೈ ಎನ್ನುವ ಮೂಲಕ ಸುಧಾಕರ್‌ ಪರ ಬ್ಯಾಟಿಂಗ್‌ ಬೀಸುತ್ತಿದ್ದಾರೆ.

ಕಳೆದ ವಿಧಾನಸಭೆಯಲ್ಲಿ ಇಬ್ಬರು ಬಿಜೆಪಿಯಿಂದ ಸ್ಪರ್ಧೆ ಮಾಡಿ ಸೋತಿದ್ದರು. ಇದಾದ ಬಳಿಕ ಡಾ.ಕೆ.ಸುಧಾಕರ್‌ ಹಾಗೂ ಎಂಟಿಬಿ ನಾಗರಾಜ್‌ ನಡುವೆ ರಾಜಕೀಯವಾಗಿ ವೈಮನಸ್ಸು ಉಂಟಾಗಿ ಪರಸ್ಪರ ದೂರ ಉಳಿದಿದ್ದರು. ಎಂಟಿಬಿ ನಾಗರಾಜ್‌ ಕೆಲ ಸಭೆ, ಸಮಾರಂಭಗಳಲ್ಲಿ ಬಹಿರಂಗವಾಗಿ ಸುಧಾಕರ್‌ ವಿರುದ್ಧ ಕಿಡಿಕಾರಿದ್ದರು. ಚುನಾವಣೆ ಬಳಿಕ ಇಬ್ಬರೂ ಎಲ್ಲೂ ಬಹಿರಂಗವಾಗಿ ಒಂದು ಕಡೆ ಕಾಣಿಸಿಕೊಂಡಿರಲಿಲ್ಲ.

2018 ರಲ್ಲಿ ಎಂಟಿಬಿ, ಡಾ.ಕೆ.ಸುಧಾಕರ್‌ ಇಬ್ಬರು ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದರು. ಎಂಟಿಬಿ ನಾಗರಾಜ್‌ ವಸತಿ ಸಚಿವರು ಆಗಿದ್ದರೆ ಡಾ.ಕೆ.ಸುಧಾಕರ್‌ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆಗಿದ್ದರು. ಆದರೆ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆದು 2019 ರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ಇಬ್ಬರು ರಾಜೀನಾಮೆ ನೀಡುವ ಮೂಲಕ ಆಪರೇಷನ್‌ ಕಮಲಕ್ಕೆ ಒಳಗಾಗಿ ಉಪಚುನಾವಣೆ ಎದುರಿಸಿದರು. ಉಪ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್‌, ಹ್ಯಾಟ್ರಿಕ್‌ ಗೆಲುವು ಸಾಧಿಸಿದರೆ ಎಂಟಿಬಿ ನಾಗರಾಜ್‌ ಹೋಸಕೋಟೆ ಕ್ಷೇತ್ರದಲ್ಲಿ ಶರತ್‌ ಬಚ್ಚೇಗೌಡ ವಿರುದ್ಧ ಸೋತರು. ಆದರೂ ಎಂಟಿಬಿ ನಾಗರಾಜ್‌ ಹಾಗೂ ಡಾ.ಕೆ.ಸುಧಾಕರ್‌ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದರು. 2023ರಲ್ಲಿ ಇಬ್ಬರು ಸೋತ ಬಳಿಕ ಇಬ್ಬರ ನಡುವೆ ರಾಜಕೀಯ ಸಂಬಂಧ ಹಳಸಿ ಪರಸ್ಪರ ಅಂತರ ಕಾಯ್ದುಕೊಂಡಿದ್ದರು. ಆದರೆ, ಈಗ ಎಂಟಿಬಿ ನಾಗರಾಜ್‌ ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅಭ್ಯರ್ಥಿ ಆಗುತ್ತಿದ್ದಂತೆ ಮತ್ತೆ ಸುಧಾಕರ್‌ಗೆ ಜೈ ಎಂದು ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿರುವ 1 ಲಕ್ಷದಷ್ಟು ಇರುವ ಕುರುಬ ಸಮುದಾಯದ ಮತ ಸೆಳೆಯಲು ಡಾ.ಕೆ.ಸುಧಾಕರ್‌ಗೆ ಎಂಟಿಬಿ ನೆರವಾಗಲಿದ್ದಾರೆ ಎಂದು ರಾಜಕೀಯ ತಜ್ಞರು ಲೆಕ್ಕಾಚಾರ ಹಾಕಿದ್ದಾರೆ.

ಗಡ್ಡ ಬೋಳಿಸಿದ ಡಾ.ಕೆ. ಸುಧಾಕರ್‌!:

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಬಳಿಕ ಗಡ್ಡ ಬಿಟ್ಟು ಗಮನ ಸೆಳೆದಿದ್ದ ಡಾ.ಕೆ.ಸುಧಾಕರ್‌, ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್‌ ಖಾತ್ರಿ ಆಗಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಗಡ್ಡ ಬೋಳಿಸಿಕೊಂಡು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮೊದಲ ಹಂತದಲ್ಲಿ ಬಿಜೆಪಿ, ಜೆಡಿಎಸ್‌ ಹಿರಿಯ ನಾಯಕರನ್ನು ಭೇಟಿ ಮಾಡಿ ಟಿಕೆಟ್‌ ಸಿಕ್ಕಿದ್ದಕ್ಕೆ ಧನ್ಯವಾದ ಅರ್ಪಿಸಿದ ಡಾ.ಕೆ.ಸುಧಾಕರ್‌ ಇದೀಗ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಮೂಲಕ ಗೆಲುವಿಗಾಗಿ ಟೆಂಪಲ್‌ ರನ್‌ ಮಾಡುತ್ತಿದ್ದಾರೆ.

ಪ್ರದೀಪ್‌, ಸುಧಾಕರ್‌ ನಡುವೆ ಮತ್ತೆ ಮಾತಿನ ಯುದ್ಧ! :

ಅತ್ತ ಲೋಕಸಭಾ ಚುನಾವಣೆಗೆ ಬಿಜೆಪಿ ಡಾ.ಕೆ.ಸುಧಾಕರ್‌ಗೆ ಟಿಕೆಟ್‌ ಘೋಷಣೆ ಮಾಡುತ್ತಿದ್ದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ರಬೆಲ್‌ ಆಗಿದ್ದಾರೆ. ಸುಧಾಕರ್‌ಗೆ ಟಿಕೆಟ್‌ ನೀಡಿರುವ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸುಧಾಕರ್‌ರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದಾಗಿ ಸವಾಲು ಹಾಕಿದ್ದಾರೆ. ಆದರೆ ಶಾಸಕ ಪ್ರದೀಪ್‌ ಈಶ್ವರ್‌ ಮಾರಿಗೆ ಸೊಪ್ಪು ಹಾಕದ ಡಾ.ಕೆ.ಸುಧಾಕರ್‌ ಎಂದಿನಂತೆ ಅವನೊಬ್ಬ ಆಯೋಗ್ಯ ಎಂದು ಮಾರ್ಮಿಕವಾಗಿ ಡೈಲಾಗ್‌ ಶಾಸಕನಿಗೆ ತಿರುಗೇಟು ನೀಡಿದ್ದಾರೆ.

– ಕಾಗತಿ ನಾಗರಾಜಪ್ಪ

Ad

ಟಾಪ್ ನ್ಯೂಸ್

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-ckm

Mudigere: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ವರ್ಶಿಸಿ ರೈತ ಸಾ*ವು

3-ckm

Chikkamagaluru: ನಡು ರಸ್ತೆಯಲ್ಲೇ ಯುವಕರ ವೀಲ್ಹಿಂಗ್; ಸ್ಥಳೀಯರಲ್ಲಿ ಆತಂಕ

9-ckm

Mudigere: ಕಾಡು ಹಂದಿ ದಾಳಿಗೆ ರೈತನ ಕೈ ಬೆರಳು ತುಂಡು, ಅಧಿಕಾರಿಗಳ ನಿರ್ಲಕ್ಷ್ಯ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

3-ckm

Chikkamagaluru: ಹೃದಯಾಘಾತದಿಂದ 50ರ ಗೃಹಿಣಿ ಸಾ*ವು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Feed stray dogs at home: Supreme Court

Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.