ಜಮೀನು ಮಂಜೂರಾತಿಗೆ ಆಗ್ರಹ
Team Udayavani, Feb 18, 2022, 3:11 PM IST
ಚಿಕ್ಕಮಗಳೂರು: ರಾಜ್ಯದಲ್ಲಿ 25 ಲಕ್ಷಕ್ಕೂ ಅಧಿ ಕ ಬಡಕುಟುಂಬಗಳು ಫಾರಂ. 50, 53, 57ರ ಅಡಿ ಅರ್ಜಿಸಲ್ಲಿಸಿದ್ದು, ಸರ್ಕಾರ ಜಮೀನು ಮಂಜೂರು ಮಾಡಿಲ್ಲ,ಸರ್ಕಾರ ಮುಂದಿನ ದಿನಗಳಲ್ಲಿ ಜಮೀನು ಮಂಜೂರುಮಾಡಬೇಕು. ತಪ್ಪಿದಲ್ಲಿ ಹೋರಾಟವನ್ನು ತಾಲೂಕು ಮಟ್ಟಕ್ಕೂವಿಸ್ತರಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ರಾಜ್ಯಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ತಿಳಿಸಿದರು.
ಗುರುವಾರ ನಗರದ ಜಿಲ್ಲಾ ಆಟದ ಮೈದಾನ ಆವರಣದಲ್ಲಿತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿದ್ದಪ್ರತಿಭಟನೆಯಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ 25ಲಕ್ಷಕ್ಕೂ ಅಧಿ ಕ ಜನರು ಸರ್ಕಾರಿ ಜಮೀನಿನಲ್ಲಿವಾಸ ಮಾಡುತ್ತಿದ್ದಾರೆ. ಜಮೀನು ಸಕ್ರಮಕ್ಕಾಗಿ ಫಾರಂ. 50,53, 57 ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದುವರೆಗೂರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ಸರ್ಕಾರ ಬಡವರಿಗೆ ಭೂಮಿಯನ್ನು ನೀಡದೆ ವಂಚಿಸಿವೆ.
ಇತ್ತೀಚೆಗೆ ಕಂದಾಯ ಸಚಿವರ ನೇತೃತ್ವದಲ್ಲಿ ಉಪಸಮಿತಿರಚಿಸಿ ಗೋಮಾಳ ಜಾಗವನ್ನು ಸಂಘ ಸಂಸ್ಥೆಗಳಿಗೆ ಮಾರಾಟಮಾಡುವ ಹುನ್ನಾರ ನಡೆಯುತ್ತಿದ್ದು, ಬಡವರಿಗೆ ಅನ್ಯಾಯಮಾಡಲಾಗುತ್ತಿದೆ ಎಂದು ದೂರಿದರು.ರಾಜ್ಯದ 11ಸಾವಿರ ಹಳ್ಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡದ ಜನರಿಗೆ ಪ್ರತ್ಯೇಕ ಸ್ಮಶಾನವಿಲ್ಲ, ಶೇ.80ರಷ್ಟುಬಡವರಿಗೆ ಜಮೀನು ಇಲ್ಲ. ಜಮೀನು ಬಂಡವಾಳ ಶಾಹಿಗಳಮತ್ತು ಶ್ರೀಮಂತರ ಪಾಲಾಗಿದೆ.
ಶೀಘ್ರವೇ ಬಡವರಿಗೆಜಮೀನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿಪಿ.ವೇಲಾಯುಧನ್, ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಮಹಿಳಾವಿಭಾಗದ ಅಧ್ಯಕ್ಷೆ ಸುಧಾ ಮಾತನಾಡಿದರು. ದಲಿತ ಸಂಘರ್ಷಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ರಾಜ್ಯಮುಖಂಡ ಜಿ.ಕೆ. ಬಸವರಾಜ್, ಕಾರ್ಯದರ್ಶಿ ಕೆ.ಆರ್.ಗಂಗಾಧರ, ಲೋಕವಳ್ಳಿ ರಮೇಶ್, ತಾಲೂಕು ಅಧ್ಯಕ್ಷ ಹರೀಶ್,ಶೀಲಾ, ಮೋಹನ್, ಬಕ್ಕಿ ಮಂಜುನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ