Chikkamagalur; ಆಸ್ಪತ್ರೆಯಿಂದ ತಪ್ಪಿಸಿಕೊಂಡ ಕೊಲೆ ಯತ್ನ ಪ್ರಕರಣದ ಆರೋಪಿ
Team Udayavani, Jan 13, 2024, 12:01 PM IST
ಚಿಕ್ಕಮಗಳೂರು: ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಯೋರ್ವ ತಪ್ಪಿಸಿಕೊಂಡಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.
ಕೊಲೆ ಯತ್ನ ಪ್ರಕರಣದ ಆರೋಪಿ ಪೂರ್ಣೇಶ್ ಎಂಬಾತ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಬಾಳೆಹೊನ್ನೂರು ಸಮೀಪ ಮನೆಯೊಂದರಲ್ಲಿ ಮಲಗಿದ್ದ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ಬಂಧಿಸಲು ಮುಂದಾದಾಗ ಆಯುಧದಿಂದ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದರು.
ಆರೋಪಿ ಪೂರ್ಣೇಶ್ ಕಾಲಿಗೆ ಗುಂಡು ತಗುಲಿ ತೀವ್ರ ಅಸ್ವಸ್ಥಗೊಂಡಿದ್ದ. ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆರೋಪಿ ಪೂರ್ಣೇಶ್ ಚೇತರಿಸಿಕೊಂಡಿದ್ದ, ಪೂರ್ಣ ಗುಣಮುಖವಾಗದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಶನಿವಾರ ಬೆಳಗಿನ ಜಾವ ಪೂರ್ಣೇಶ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ.
ಈತನ ಸುಳಿವು ಸಿಕ್ಕಲ್ಲಿ 9480805100, 8277991000, 08262-230540, 0862-235608 ಪಿಎಸ್ ಐ ಬಾಳೆಹೊನ್ನೂರು 9480805158, 08266-250666 ಈ ಸಂಖ್ಯೆಯನ್ನು ಸಂಪರ್ಕಿಸು ವಂತೆ ಪೊಲೀಸ್ ಇಲಾಖೆ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ