ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡನೀಯ: ಸಿ.ಟಿ.ರವಿ
Team Udayavani, May 6, 2021, 10:59 PM IST
ಚಿಕ್ಕಮಗಳೂರು: ಹತ್ಯಾ ರಾಜಕಾರಣದಿಂದ ಪಕ್ಷದ ಬೆಳವಣಿಗೆಯನ್ನು ತಡೆಯಲು ಸಾಧ್ಯವಿಲ್ಲ. ಪಶ್ಚಿಮ ಬಂಗಾಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಂದು 72ಗಂಟೆಗಳಲ್ಲಿ ಬಿಜೆಪಿ ಕಚೇರಿ, ಕಾರ್ಯಕರ್ತರ ಮನೆ, ಅಂಗಡಿಗಳನ್ನು ಲೂಟಿ ಮಾಡಿ, 12 ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ. 281ಕ್ಕೂ ಹೆಚ್ಚು ದೊಂಬಿ ಪ್ರಕರಣ ನಡೆದಿದೆ. ಕಾನೂನು, ಸುವ್ಯವಸ್ಥೆ ಕಾಪಾಡಬೇಕಾದ ಪಶ್ಚಿಮ ಬಂಗಾಳ ಸರ್ಕಾರ ಗೂಂಡಾಗಳಿಗೆ ಬೆನ್ನೆಲುಬಾಗಿ ನಿಂತು ಸಂವಿಧಾನಕ್ಕೆ ವಿರುದ್ಧವಾಗಿ ವರ್ತನೆ ಮಾಡಿದೆ ಎಂದರು.
ರಾಜಕೀಯ ಪಕ್ಷದ ಧ್ವನಿಯನ್ನು ಹತ್ಯೆಯ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಮತ್ತೆ ಹತ್ತು ಪಟ್ಟು ಸಾಮರ್ಥ್ಯದಿಂದ ಪಕ್ಷ ಬೆಳೆಯುತ್ತದೆ. ಈ ಹತ್ಯಾ ರಾಜಕಾರಣ ಕೊನೆಯಾಗಬೇಕು. ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿದರು.
ಬೆಡ್ ಬ್ಲಾಕಿಂಗ್ ನೀಚ ಕೃತ್ಯ: ನಾನು ಮೆಡಿಕಲ್ ಸೀಟ್ ಬ್ಲಾಕ್ ಮಾಡುವುದು ಕೇಳಿದ್ದೆ. ರೋಗಿಗಳಿಗೆ ಚಿಕಿತ್ಸೆ ನೀಡುವ ಬೆಡ್ ಬ್ಲಾಕಿಂಗ್ ಮಾಡಿರುವುದು ಇದೇ ಮೊದಲು ಕೇಳಿದ್ದು. ಇವರ ಈ ಕೃತ್ಯಕ್ಕೆ ದೇವರು ಕ್ಷಮಿಸುವುದಿಲ್ಲ. ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು. ಸಂಸದ ತೇಜಸ್ವಿ ಸೂರ್ಯ ಒಳ್ಳೆಯ ಕೆಲಸ ಮಾಡಿದ್ದಾರೆ.
ಯಾವ್ಯಾವ ಆಸ್ಪತ್ರೆಯಲ್ಲಿ ಆಗಿದೆ. ಈ ರೀತಿ ಎಷ್ಟು ಮಾಡಿದ್ದಾರೆಂಬ ಸಂಗತಿ ಹೊರಬರಬೇಕು. ಪ್ರಾಣದ ಜತೆ ಚೆಲ್ಲಾಟವಾಡುವ ನೀಚ ಕೃತ್ಯ ಮಾಡಿದ್ದಾರೆ. ಇದಕ್ಕೆ ಕ್ಷಮೆಯಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ