ಕಠಿಣ ಕರ್ಫ್ಯೂ; ಮನೆಯಲ್ಲೇ ಜನ ಲಾಕ್‌!


Team Udayavani, May 12, 2021, 7:35 PM IST

12-17

ಚಿಕ್ಕಮಗಳೂರು: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವಿ ಧಿಸಿರುವ ಕಠಿಣ ಕರ್ಫ್ಯೂ ಎರಡನೇ ದಿನ ಜಿಲ್ಲಾದ್ಯಂತ ಯಶಸ್ವಿಯಾಗಿದ್ದು, ಬಹುತೇಕ ಜನರು ಮನೆಯಲ್ಲೇ ಇದ್ದು ಕಾಲ ಕಳೆದರು. ಮೊದಲ ದಿನ ಕೆಲವೊಂದಿಷ್ಟು ಗೊಂದಲ, ಗಲಿಬಿಲಿಗೆ ಎಡೆಮಾಡಿಕೊಟ್ಟ ರೆ ಮಂಗಳವಾರ ಜನರು ಸ್ವಯಂಪ್ರೇರಿತವಾಗಿ ಮನೆಯಲ್ಲೇ ಉಳಿದರು.

ನಗರದ ಪ್ರಮುಖ ರಸ್ತೆಗಳೆಲ್ಲ ಖಾಲಿಯಾಗಿದ್ದವು.ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಮನೆಯ ಸಮೀಪದ ಮಾರುಕಟ್ಟೆ ಅಥವಾ ಅಂಗಡಿ- ಮುಂಗಟ್ಟುಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಎಂದಿನಂತೆ ಅಗತ್ಯ ವಸ್ತುಗಳ ಖರೀದಿ ನಡೆಸಿದರು.

ಬೇರೆ ದಿನಗಳಿಗೆ ಹೋಲಿಸಿದರೆ ಮಂಗಳವಾರ ಅಂಗಡಿಗಳತ್ತ ಮುಖ ಮಾಡಿದ ಜನರ ಸಂಖ್ಯೆಯೂ ಕಡಿಮೆಯಾಗಿತ್ತು. ಪೆಟ್ರೋಲ್‌ ಬಂಕ್‌, ಮೆಡಿಕಲ್‌ ಶಾಪ್‌, ಸರ್ಕಾರಿ ಕಚೇರಿ ಹಾಗೂ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು, ಸಮಯ ಮೀರುತ್ತಿದ್ದಂತೆ ಎಲ್ಲಾ ಅಂಗಡಿ- ಮುಂಗಟ್ಟುಗಳನ್ನು ಪೊಲೀಸರು ಮುಚ್ಚಿಸಿದರು. ವಾಹನಗಳಲ್ಲಿ ತೆರಳಿ ಅಗತ್ಯ ವಸ್ತುಗಳನ್ನು ತರಲು ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರು ತಲೆಯ ಮೇಲೆ ಹೊತ್ತು ಮನೆಯ ಕಡೆ ಹೆಜ್ಜೆ ಹಾಕಿದರು.

ಸೋಮವಾರ ಪೊಲೀಸರ ಬಿಗಿ ನಿಲುವಿನಿಂದ ಕಂಗೆಟ್ಟ ಜನರು ಮಂಗಳವಾರ ಮನೆಯಿಂದ ಹೊರ ಬರಲು ಭಯಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸುಖಾಸುಮ್ಮನೆ ಹೊರ ಹೋಗಿ ದಂಡ ಕಟ್ಟೋದ್ಯಾಕೆ, ವಾಹನ ಸೀಜ್‌ ಮಾಡಿಸಿಕೊಳ್ಳುವುದ್ಯಾಕೆ ಎಂದು ಬಹುತೇಕ ಮಂದಿ ವಾಹನಗಳನ್ನು ಬದಿಗಿಟ್ಟು ಕಾಲ್ನಡಿಗೆಯಲ್ಲೇ ತೆರಳಿ ಅಗತ್ಯ ವಸ್ತುಗಳನ್ನು ಖರೀದಿಸಿದರು.

ಎಂದಿಗಿಂತ ಮಂಗಳವಾರ ಪಟ್ಟಣ ಪ್ರದೇಶದಲ್ಲಿ ವಾಹನ ಸಂಚಾರವು ಕಡಿಮೆ ಇದ್ದು, ಅಗತ್ಯ ತುರ್ತು ಅವಶ್ಯಕತೆಗಾಗಿ ಮಾತ್ರ ಜನರು ವಾಹನ ಬಳಕೆ ಮಾಡಿದರು. ನಗರದ ಪ್ರವೇಶ ದ್ವಾರಗಳಲ್ಲಿ ತೆರೆದಿರುವ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರು ಬೆಳಗ್ಗೆಯೇ ಹಾಜರಾಗಿ ಅನಗತ್ಯ ಸಂಚಾರದ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.

ತುರ್ತು ಸಂದರ್ಭದಲ್ಲಿ ವಾಹನಗಳಲ್ಲಿ ತಿರುಗಾಡುವರಿಗೆ ಮಾತ್ರ ಪೊಲೀಸರು ಅವಕಾಶ ಕಲ್ಪಿಸಿದರು. ಉಳಿದಂತೆ ಪೊಲೀಸರು ಜನರೊಟ್ಟಿಗೆ ಸಂಯಮದಿಂದ ವರ್ತಿಸಿ ಸುಖಾಸುಮ್ಮನೆ ಓಡಾಡದಂತೆ ತಿಳಿ ಹೇಳಿ ಕಳಿಸುತ್ತಿದ್ದರು.

ಮಂಗಳವಾರ ಬೆಳಗ್ಗೆ 10 ಗಂಟೆಯ ವೇಳೆಗೆ ಇಡೀ ನಗರದ ಚಿತ್ರಣವೇ ಬದಲಾಗಿ, ಎಲ್ಲಿ ನೋಡಿದರೂ ಖಾಲಿ ರಸ್ತೆಗಳು ಕಾಣಿಸುತ್ತಿದ್ದವು. ಅಲ್ಲೊಂದು ಇಲ್ಲೊಂದು ವಾಹನಗಳನ್ನು ಹೊರತುಪಡಿಸಿ ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.