ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ
ಚಿಕ್ಕಮಗಳೂರು ಜಿಲ್ಲೆಗೆ ವಿಧಾನ ಪರಿಷತ್ ಉಪಸಭಾಪತಿ ಸ್ಥಾನ ಮತ್ತೆ ಒಲಿಯುವ ಸಾಧ್ಯತೆ
Team Udayavani, Jan 29, 2021, 5:56 PM IST
ಚಿಕ್ಕಮಗಳೂರು: ಜಿಲ್ಲೆಗೆ ವಿಧಾನ ಪರಿಷತ್ ಉಪಸಭಾಪತಿ ಸ್ಥಾನ ಮತ್ತೆ ಒಲಿಯುವ·ಸಾಧ್ಯತೆ ಬಹುತೇಕ ಖಚಿತವಾಗಿದ್ದು, ಗುರುವಾರ ವಿಧಾನ ಪರಿಷತ್ ಸದಸ್ಯ ಎಂ.ಕೆ.·ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ತಿಂಗಳು ಜೆಡಿಎಸ್ ಮುಖಂಡ, ಸಹಕಾರಿಧುರೀಣ ಎಸ್.ಎಲ್. ಧರ್ಮೇಗೌಡ ಅಕಾಲಿಕ ನಿಧನದಿಂದ ವಿಧಾನ ಪರಿಷತ್ಉಪ ಸಭಾಪತಿ ಸ್ಥಾನ ಖಾಲಿಯಾಗಿದ್ದು ಆ ಸ್ಥಾನ ಮತ್ತೆ ಜಿಲ್ಲೆಗೆ ಒಲಿಯಲಿದೆಯೇನೋಡಬೇಕಿದೆ. ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಜಿಲ್ಲೆಯ ಮೂಡಿಗೆರೆತಾಲೂಕು ಗಟ್ಟದಹಳ್ಳಿ ಗ್ರಾಮದಲ್ಲಿ 1961, ನ.28ರಂದು ಎಂ.ಯು.ಕಾಳೇಗೌಡ ಮತ್ತು ರತ್ನಮ್ಮ ದಂಪತಿ ಪುತ್ರನಾಗಿ ಜನಿಸಿದರು. ಎಂ.ಕೆ.ಪ್ರಾಣೇಶ್ ಬಿಎ ಪದವಿ ಪಡೆದಿದ್ದಾರೆ. 1989ರಿಂದ ಬಿಜೆಪಿಯಲ್ಲಿಸಕ್ರಿಯರಾದ ಅವರು, 1991ರಿಂದ 1998ರವರೆಗೆ ತಾಲೂಕುಯುವ ಮೋರ್ಚಾ ಅಧ್ಯಕ್ಷರಾಗಿ, 1998ರಿಂದ 2001ರವರೆಗೆ ಬಿಜೆಪಿಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.2000ದಿಂದ 2005ರವರೆಗೆ ಜಿಪಂ ಸದಸ್ಯರಾಗಿದ್ದರು. 2004ರಿಂದ 2007ರವರೆಗೆ ಬಿಜೆಪಿರಾಜ್ಯ ಕಾರ್ಯಕಾರಿ ಸದಸ್ಯರಾಗಿ, 2001ರಿಂದ 2004 ಮತ್ತು 2007ರಿಂದ 2011ರವರೆಗೆಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. 2010ರಿಂದ2013ರವರೆಗೆ ಜಂಗಲ್ ಲಾಡ್ಜ್$Õ ಮತ್ತು ರೆಸಾರ್ಟ್ ನಿಗಮದ ಅಧ್ಯಕ್ಷರಾಗಿದ್ದರು.
2016ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಸದ್ಯ ವಿಧಾನ ಪರಿಷತ್ ಸದಸ್ಯರಾಗಿರುವ ಅವರು ಉಪಸಭಾಪತಿ ಸ್ಥಾನಕ್ಕೆ ನಾಮಪತ್ರಸಲ್ಲಿಸಿದ್ದು, ಅ ಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಓದಿ :·ಜಲಭದ್ರತಾ ಯೋಜನೆಗೆ ಜೆ.ಸಿ.ಪುರ ಗ್ರಾಪಂ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು