ತೌಕ್ತೇ ಅಬ್ಬರ: ಕಾಫಿನಾಡಲ್ಲಿ ಭಾರೀ ಮಳೆ
Team Udayavani, May 16, 2021, 10:34 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ತೌಕ್ತೇ ಚಂಡಮಾರುತದ ಪರಿಣಾಮ ಕಾಫಿನಾಡಿನಾದ್ಯಂತ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ ಶನಿವಾರವೂ ಮುಂದುವರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
ನಿರಂತರ ಮಳೆಯೊಂದಿಗೆ ಮೋಡ ಕವಿದ ವಾತಾವರಣ ಹಾಗೂ ಶೀತಗಾಳಿಯಿಂದ ಜನರು ಮನೆಯಲ್ಲೇ ಬಂಧಿಯಾಗಿದ್ದಾರೆ. ಜಿಲ್ಲೆಯ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಸುತ್ತಮುತ್ತ ನಿರಂತರವಾಗಿ ಧಾರಾಕಾರ ಮಳೆಯಾಗಿದೆ.
ಇಡೀ ದಿನ ಗಾಳಿಯೊಂದಿಗೆ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಕೆಲವು ಮರಗಳು ನೆಲಕಚ್ಚಿವೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ನಿರಂತರ ಮಳೆಯಿಂದ ಮಲೆನಾಡು ಭಾಗದಲ್ಲಿ ಕೃಷಿ ಚಟುವಟಿಗೆ ಅಡ್ಡಿಯಾಗಿದೆ.
ಈ ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಕೆರೆಕಟ್ಟೆಗಳಲ್ಲಿ ನೀರು ತುಂಬಿಕೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತ ನಿರಂತರ ಸಾಧಾರಣ ಮಳೆಯಾಗಿದೆ. ಕಡೂರು, ತರೀಕೆರೆ ಹಾಗೂ ಬೀರೂರು ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಶೀತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ.
ಕಳೆದೆರೆಡು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಚಿಕ್ಕಮಗಳೂರು ನಗರದ ರಾಮೇಶ್ವರ ನಗರದ ರುಕ್ಮಿಣಿಯಮ್ಮ ಎಂಬುವರ ಮನೆಯ ಗೋಡೆ ಕುಸಿದು ಚಾವಣಿಗೆ ಹಾಕಲಾಗಿದ್ದ ಶೀಟುಗಳು ಒಡೆದು ಹೋಗಿವೆ.
ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಂಭವ ಹೆಚ್ಚಿರುವ ಕಾರಣದಿಂದ ನದಿಪಾತ್ರದಲ್ಲಿ ಯಾರೂ ಓಡಾಡದಂತೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ