ಮಹಿಳಾ ದೌರ್ಜನ್ಯ ನಿಲ್ಲದಿರುವುದು ಆತಂಕಕಾರಿ
ಸಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಜಿಪಂ ಸದಸ್ಯೆ ಶಿಲ್ಪಾ ರವಿ ಉದ್ಘಾಟಿಸಿದರು.
Team Udayavani, Jan 29, 2021, 6:13 PM IST
ಶೃಂಗೇರಿ: ಮಹಿಳೆಯರ ರಕ್ಷಣೆಗೆ ಹಲವಾರು ಕಾನೂನುಗಳಿದ್ದು, ಅದರ ಅರಿವನ್ನು ಪ್ರತಿಯೊಬ್ಬ ಮಹಿಳೆಯೂ ಅರಿತಿರಬೇಕು ಎಂದು ಜಿಪಂ
ಸದಸ್ಯೆ ಶಿಲ್ಪಾ ರವಿ ಹೇಳಿದರು.
ಪಟ್ಟಣದ ಸರಕಾರಿ ಪಪೂ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ
ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಹೊಸ ಕಾಯ್ದೆಗಳನ್ನು ರೂಪಿಸಲಾಗುತ್ತಿದ್ದರೂ, ದೌರ್ಜನ್ಯ ಇನ್ನೂ ಮುಂದುವರಿಯುತ್ತಿರುವುದು ಆತಂಕ ಕಾರಿಯಾಗಿದೆ.
ಪ್ರತಿಯೊಬ್ಬರೂ ಕಾನೂನಿನ ಕನಿಷ್ಟ ಜ್ಞಾನ ಹೊಂದಿರುವುದು ಅತ್ಯಗತ್ಯ ಎಂದರು. ಭ್ರೂಣ ಹತ್ಯೆ ನಿಷೇದ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದ ವಕೀಲ ಎಸ್.ಜಿ. ಶಶಿಭೂಷಣ್, ಇಂದಿನ ಸಮಾಜದಲ್ಲಿ ಹೆಣ್ಣು- ಗಂಡು ಎಂಬ ಬೇಧ ಭಾವವಿಲ್ಲ. ಹೆಣ್ಣು ಮಕ್ಕಳು ಈಗ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಪುರುಷರಿಗೆ ಸರಿಸಮನಾಗಿದ್ದಾರೆ. ಆದರೆ ಈಗಲೂ ಗಂಡು ಮಕ್ಕಳೇ ಬೇಕೆಂಬ ಹಠದಿಂದ ಸಮಾಜದಲ್ಲಿ
ಅಸಮತೋಲನ ಉಂಟಾಗುತ್ತಿದೆ ಎಂದರು.
ವಕೀಲೆ ರಾಜೇಶ್ವರಿ ಹೆಗ್ಡೆ ಹೆಣ್ಣು ಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಮಾತನಾಡಿದರು. ತಾಪಂ ಅಧ್ಯಕ್ಷೆ ಜಯಶೀಲ, ಜಿಪಂ ಸದಸ್ಯ ಬಿ. ಶಿವಶಂಕರ್, ಸಿಡಿಪಿಒ ಎನ್.ಜಿ. ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಲೋಚಕಿ ರೇಣುಕಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ