ಲಸಿಕೆ ನೀಡುವಲ್ಲಿ ಕೇಂದ್ರ-ರಾಜ್ಯ ಸರಕಾರ ವಿಫಲ
Team Udayavani, Jun 3, 2021, 11:00 PM IST
ಕಡೂರು: ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳಿಸುವುದು ಅತ್ಯಗತ್ಯವಾಗಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಲಸಿಕೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶರತ್ ಕೃಷ್ಣಮೂರ್ತಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿಷಯದಲ್ಲಿ ದಿನಕ್ಕೊಂದು, ವಾರಕ್ಕೊಂದು ಹೊಸ ಹೊಸ ಮಾರ್ಗಸೂಚಿಗಳನ್ನು ಸರಕಾರ ಆದೇಶಿಸುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಮೊದಲನೇ ಮತ್ತು ಎರಡನೇ ಡೋಸ್ ನಡುವಿನ ಅಂತರ 28 ದಿನಗಳಾಗಿತ್ತು. ನಂತರ ಅದು 45 ದಿನ, 84 ಇದೀಗ 90 ದಿನಗಳ ಅಂತರಕ್ಕೆ ಬದಲಾಗುತ್ತಾ ಬಂದಿದೆ. ಆದರೂ ಸಿಗುತ್ತಿಲ್ಲ ಎಂದು ದೂರಿದರು.
ಲಸಿಕೆ ನೀಡುವ ಕಾರ್ಯವು ಮಂದಗತಿಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರಿಗೆ ಲಸಿಕೆ ನೀಡುವಲ್ಲಿ ವಿಳಂಬವಾಗುತ್ತಿದೆ. ಆದ್ಯತೆ ಪಟ್ಟಿ ತಯಾರಿಸಿಕೊಂಡು ನೀಡುತ್ತಿದ್ದೇವೆ ಎಂಬ ಮಾತು ಕೇಳಿ ಬರುತ್ತಿದೆ. ಯಾರ್ಯಾರಿಗೆ ಆದ್ಯತೆ ಎಂಬ ಮಾಹಿತಿ ಲಭ್ಯವಾಗುತ್ತಿಲ್ಲ. ಇದನ್ನು ಆಡಳಿತವು ಸ್ಪಷ್ಟವಾಗಿ ತಿಳಿಸಬೇಕು. ಲಸಿಕೆ ಅನುಷ್ಠಾನವು ಪಾರದರ್ಶಕತೆಯಿಂದ ಕೂಡಿರಬೇಕು.
ತಾಲೂಕಿನಲ್ಲಿ ಸೋಂಕಿತರ ಮತ್ತು ಸಾವಿಗೀಡಾದವರ ಅಂಕಿ ಅಂಶಗಳನ್ನು ಬಿಡುಗಡೆ ಮಾಡುತ್ತಿರುವಂತೆ ಲಸಿಕೆ ಪಡೆದವರ ವಿವರಗಳನ್ನು ನಿತ್ಯ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಕೋವಿಡ್-19ರ 3ನೇ ಅಲೆಯಿಂದ ಮಕ್ಕಳಿಗೆ ಅಪಾಯ ಎಂಬ ಮುನ್ಸೂಚನೆಗಳು ಬರುತ್ತಿದ್ದು, 18 ವರ್ಷ ಕೆಳಗಿನವರಿಗೆ ಲಸಿಕೆ ನೀಡುವ ವಿಚಾರದಲ್ಲಿ ಸರಕಾರದ ಮಾರ್ಗಸೂಚಿಗಳೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಪುರಸಭೆ ಸದಸ್ಯ ತೋಟದ ಮನೆ ಮೋಹನ್ ಮಾತನಾಡಿ, ಪುರಸಭೆ ಸೇರಿದಂತೆ ಇತರೆ ಜನಪ್ರತಿನಿಧಿಗಳಿಗೂ ಸಹ ಲಸಿಕೆ ನೀಡಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ಪುರಸಭೆ ಸದಸ್ಯೆ ಜ್ಯೋತಿ ಆನಂದ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಾಯಿತ್ರಿ ಕಿರಣ್, ಎಂ.ಸೋಮಶೇಖರ್, ಮಂಜುನಾಥ್, ಶರತ್ ಯಾದವ್, ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ