ಕೋಟೆನಾಡಲ್ಲಿ ಕೈಗೆಟಕುತ್ತಿದೆ ಆಕ್ಸಿಜನ್‌


Team Udayavani, Jun 11, 2021, 10:48 PM IST

11-14

„ತಿಪ್ಪೇಸ್ವಾಮಿ ನಾಕೀಕೆರೆ

ಚಿತ್ರದುರ್ಗ: ಮಹಾಮಾರಿ ಕೊರೊನಾ ಸೋಂಕಿನ ಎರಡನೇ ಅಲೆ ಇಡೀ ವಾತಾವರಣವನ್ನೇ ಉಸಿರುಗಟ್ಟಿಸಿತ್ತು. ಆದರೆ ದಿನ ಕಳೆದಂತೆ ಉಸಿರಾಟ ನಿರಾಳವಾಗುತ್ತಿದೆ. ಪರದಾಟ ಮಾಡಬೇಕಿದ್ದ ಆಕ್ಸಿಜನ್‌ ಈಗ ಸುಲಭವಾಗಿ ಸಿಗುತ್ತಿದೆ. ದಿನವೂ ಆಕ್ಸಿಜನ್‌, ಆಕ್ಸಿನೇಟೆಡ್‌ ಬೆಡ್‌, ರೆಮ್‌ಡಿಸಿವಿರ್‌ ಎಂದು ತಲೆಕೆಡಿಸಿಕೊಳ್ಳಬೇಕಾಗಿದ್ದ ಅ ಧಿಕಾರಿಗಳು ಕೊಂಚ ರಿಲ್ಯಾಕ್ಸ್‌ ಆಗಿದ್ದಾರೆ.

ಜಿಲ್ಲೆಯಲ್ಲಿ ಆಕ್ಸಿಜನ್‌ ಹಾಗೂ ಆಕ್ಸಿನೇಟೆಡ್‌ ಬೆಡ್‌ಗಳ ಬೇಡಿಕೆ ಕಡಿಮೆಯಾಗುತ್ತಿದೆ. ಸರಿಯಾಗಿ ಒಂದು ತಿಂಗಳ ಹಿಂದೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 5 ರಷ್ಟಿತ್ತು. ಇದು ರಾಜ್ಯದಲ್ಲೇ ಕೊನೆಯ ಸ್ಥಾನವಾಗಿತ್ತು. ಆದರೆ ನಂತರದ ದಿನಗಳಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿ ಪಾಸಿಟಿವಿಟಿ ದರ ಶೇ. 20ಕ್ಕೆ ತಲುಪಿತ್ತು. ಆದರೀಗ ಪಾಸಿಟಿವಿಟಿ ದರ ಇಳಕೆಯಾಗುತ್ತಿದೆ.

ದಿನವಿಡೀ ಆಸ್ಪತ್ರೆ ಬಾಗಿಲಿನಲ್ಲಿ ಜನ ಆಕ್ಸಿಜನ್‌ಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲೂ ಬೆಡ್‌ಗೆ ಲಾಭಿ ಮಾಡಬೇಕಾಗಿತ್ತು. ಎಷ್ಟು ಹಣ ಕೊಟ್ಟರೂ ಆಕ್ಸಿಜನ್‌ ಹಾಗೂ ಬೆಡ್‌ ಸಿಗದ ಸ್ಥಿತಿಯಿಂದ ಹೊರಗೆ ಬರುತ್ತಿದ್ದೇವೆ. ಸಾಕಷ್ಟು ಆಕ್ಸಿಜನ್‌ ಹಾಗೂ ಆಕ್ಸಿಜನ್‌ ಕಾನ್ಸ್‌ಂಟ್ರೇಟರ್ ಬಂದಿವೆ.

ಜನರಲ್ಲಿ ಕೋವಿಡ್‌ ಕುರಿತು ಸಾಕಷ್ಟು ಜಾಗೃತಿ ಮೂಡಿದೆ. ರೋಗ ಲಕ್ಷಣ ಕಂಡು ಬಂದ ತಕ್ಷಣ ಚಿಕಿತ್ಸೆ ಪಡೆಯುತ್ತಿರುವ ಕಾರಣ ಆಕ್ಸಿಜನ್‌ ಪಡೆಯುವ ಸ್ಥಿತಿಗೆ ಹೋಗದಂತಾಗಿದೆ.

ಸದ್ಯದ ಪಾಸಿಟಿವಿಡಿ ದರ ಶೇ. 8.50: ಸರಿಯಾಗಿ ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯ ಕೋವಿಡ್‌ ಪಾಸಿಟಿವಿಟಿ ರೇಟ್‌ ಕಳೆದ ಶೇ. 4.9 ರಷ್ಟಿತ್ತು. ಆದರೆ ನಂತರ ಶೇ. 20 ರವರೆಗೆ ತಲುಪಿ ಈಗ ಶೇ. 8.50ಕ್ಕೆ ಇಳಿದಿದೆ. ತಿಂಗಳ ಹಿಂದೆ ಶೇ.1 ರಷ್ಟಿದ್ದ ಸಾವಿನ ಪ್ರಮಾಣ ಈಗ ಶೇ. 0.48ಕ್ಕೆ ಇಳಿಕೆಯಾಗಿದೆ. ಗುಣಮುಖರಾಗುವವರ ಪ್ರಮಾಣ ತಿಂಗಳ ಹಿಂದೆ ಶೇ. 90.22 ರಷ್ಟಿತ್ತು.

ಈಗ 68.81 ರಲ್ಲಿದೆ. ಶೇ. 300 ರಷ್ಟು ಹೆಚ್ಚು ಪರೀಕ್ಷೆ: ಜಿಲ್ಲೆಯಲ್ಲಿ ಪ್ರತಿ ದಿನ ಕೋವಿಡ್‌ ಸೋಂಕಿನ ಪರೀಕ್ಷೆಯ ಪ್ರಮಾಣವನ್ನು 1066 ರಷ್ಟು ಮಾಡಬೇಕು ಎಂದು ರಾಜ್ಯ ಆರೋಗ್ಯ ಸಚಿವಾಲಯ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಆದರೆ, ಜಿಲ್ಲಾಡಳಿತ ಏರುಗತಿಯಲ್ಲಿ ಸಾಗುತ್ತಿರುವ ಸೋಂಕಿಗೆ ಕಡಿವಾಣ ಹಾಕುವ ಉದ್ದೇಶದಿಂದ ಟೆಸ್ಟಿಂಗ್‌ ಪ್ರಮಾಣವನ್ನು 3 ಸಾವಿರಕ್ಕಿಂತ ಹೆಚ್ಚಾಗಿದೆ, ಅಂದರೆ ಶೇ.300 ರಷ್ಟು ಪರೀಕ್ಷೆ ಪ್ರಮಾಣ ಹೆಚ್ಚಾಗಿದೆ. ಶೀಘ್ರ ಪತ್ತೆ, ತ್ವರಿತ ಚಿಕಿತ್ಸೆ ಎನ್ನುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಒಟ್ಟನಲ್ಲಿ ರಾಜ್ಯದಲ್ಲೇ ಕಡಿಮೆ ಇದ್ದ ಸೋಂಕಿನ ಪ್ರಮಾಣ ಒಮ್ಮೆಲೆ ಏರಿಕೆಯಾಗಿ ಆತಂಕಕ್ಕೆ ಕಾರಣವಾಗಿತ್ತು. ಈಗ ಇಳಿಕೆಯಾಗುತ್ತಿರುವುದು ಜನರಲ್ಲಿ ಸಮಾಧಾನ ಮೂಡಿಸಿದೆ.

106 ಆಕ್ಸಿಜನ್‌ ಬೆಡ್‌ಗಳು ಖಾಲಿ!

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಸೋಂಕಿತರಿಗೆ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡವರಿಗಾಗಿ 627
ಆಕ್ಸಿನೇಟೆಡ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಬುಧವಾರದ (ಜೂ.8) ವರದಿಯಂತೆ 521 ಬೆಡ್‌ ಭರ್ತಿಯಾಗಿದ್ದು, 106 ಬೆಡ್‌ ಖಾಲಿ ಇವೆ. ಜಿಲ್ಲಾ ಆಸ್ಪತ್ರೆಯಲ್ಲಿ 185 ಆಕ್ಸಿನೇಟೆಡ್‌ ಬೆಡ್‌ಗಳಿದ್ದು, ಎಲ್ಲವೂ ಭರ್ತಿಯಾಗಿವೆ. ತಾಲೂಕು ಆಸ್ಪತ್ರೆಗಳಲ್ಲಿರುವ 270 ಬೆಡ್‌ಗಳ ಪೈಕಿ 209 ಭರ್ತಿಯಾಗಿದ್ದು, 61 ಖಾಲಿಯಿವೆ. ಖಾಸಗಿ ಆಸ್ಪತ್ರೆಗಳಲ್ಲಿರುವ 202 ಬೆಡ್‌ಗಳ ಪೈಕಿ, 157 ಭರ್ತಿಯಾಗಿದ್ದು, 45 ಆಕ್ಸಿಜನ್‌ಯುಕ್ತ ಬೆಡ್‌ಗಳು ಖಾಲಿ ಇವೆ. 53 ಐಸಿಯು ಬೆಡ್‌ ಗಳಲ್ಲಿ 44 ಭರ್ತಿಯಾಗಿದ್ದು, 11 ಖಾಲಿ ಉಳದಿವೆ. 24 ವೆಂಟಿಲೇಟೆಡ್‌ ಬೆಡ್‌ಗಳ
ಪೈಕಿ 23 ಭರ್ತಿಯಾಗಿ 1 ಖಾಲಿ ಇವೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.