ತೈಲಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ
Team Udayavani, Jun 13, 2021, 9:38 PM IST
ಕಡೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಡೂರು ಬ್ಲಾಕ್ ಕಾಂಗ್ರೆಸ್ ಮುಖಂಡರು ಪಟ್ಟಣದ ಪೆಟ್ರೋಲ್ ಬಂಕ್ಗಳ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಮಲ್ಲಿಕಾರ್ಜುನ ಚಿತ್ರಮಂದಿರದ ಪಕ್ಕದಲ್ಲಿರುವ ಪೆಟ್ರೋಲ್ ಬಂಕ್ನ ಮುಂದೆ ಕೆ.ಎಸ್. ಆನಂದ್, ಕೆ.ಎಂ. ಕೆಂಪರಾಜು, ಶರತ್ ಕೃಷ್ಣಮೂರ್ತಿ, ವನಮಾಲ ದೇವರಾಜು, ಎಂ.ಎಚ್. ಚಂದ್ರಪ್ಪ, ಬಾಸೂರು ಚಂದ್ರಮೌಳಿ ಮತ್ತಿತರ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನು ದ್ದೇಶಿಸಿ ಜಿಪಂ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಮಾತನಾಡಿ, ಮನಮೋಹನ್ಸಿಂಗ್ ಪ್ರಧಾನಿಯಾದ ಸಂದರ್ಭದಲ್ಲಿ 65 ರೂ. ಇದ್ದ ಪೆಟ್ರೋಲ್ ಬೆಲೆ ಇದೀಗ 100 ರೂ.ಗಳ ಗಡಿ ದಾಟಿದ್ದು, ಅಡುಗೆ ಅನಿಲದ ಸಬ್ಸಿಡಿ ವಾಪಸ್ ಪಡೆದಿದ್ದು 900 ರೂ.ಗಳಿಗೆ ಏರಿಕೆಯಾಗಿರುವುದು ಮೋದಿ ಸರಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಲೇವಡಿ ಮಾಡಿದರು.
ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸಮಿತಿಯ ಸೂಚನೆ ಮೇರೆಗೆ ಶುಕ್ರವಾರ ಜಿಲ್ಲಾ ಕೇಂದ್ರಗಳಲ್ಲಿ, ಶನಿವಾರ ತಾಲೂಕು ಕೇಂದ್ರಗಳಲ್ಲಿ, ಭಾನುವಾರ ಹೋಬಳಿ ಮಟ್ಟದಲ್ಲಿ ನಂತರ ಗ್ರಾಮೀಣ ಭಾಗಗಳಲ್ಲಿರುವ ಪೆಟ್ರೋಲ್ ಬಂಕ್ಗಳ ಮುಂದೆ ಇದೇ ರೀತಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.
ಜಿಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಎಚ್. ಚಂದ್ರಪ್ಪ ಜಿಪಂ ಮಾಜಿ ಸದಸ್ಯೆ ವನಮಾಲ ದೇವರಾಜು, ಪುರಸಭೆ ಸದಸ್ಯ ತೋಟದಮನೆ ಮೋಹನ್, ಯುವ ಕಾಂಗ್ರೆಸ್ನ ವಿನಯ್ ಹೊಳ್ಳ, ಚಿಕ್ಕಂಗಳ ಪ್ರಕಾಶ್, ದಾಸಯ್ಯನಗುತ್ತಿ ಚಂದ್ರಪ್ಪ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್