ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ: ರಂಭಾಪುರಿ ಶ್ರೀ


Team Udayavani, Jul 8, 2021, 10:51 PM IST

8-20

ಬಾಳೆಹೊನ್ನೂರು: ಮನುಷ್ಯ ಜೀವನದಲ್ಲಿ ಆಶಾವಾದಿಯಾಗಿ ಬದುಕಬೇಕಲ್ಲದೇ, ನಿರಾಶಾವಾದಿ ಯಾಗಿ ಬಾಳಬಾರದು. ಸತ್ಕಾರ್ಯಗಳಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ|ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.

ತಿಪಟೂರು ಶ್ರೀ ಜಗದ್ಗುರು ರೇಣುಕ ಮಂದಿರದ ಆವರಣದಲ್ಲಿ ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಮಂಗಲ ಭವನದ ಭೂಮಿ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ವೀರಶೈವ ಧರ್ಮ ಉದಾತ್ತವಾದ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತಾ ಬಂದಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ವಿಶ್ವಬಂಧುತ್ವದ ಆದರ್ಶ ಚಿಂತನಗಳನ್ನು ಬೋಧಿಸಿದ್ದು ನಮ್ಮೆಲ್ಲರಿಗೆ ದಾರಿದೀಪ.

ಬಾಳೆಹೊನ್ನೂರು ಧರ್ಮ ಪೀಠದಿಂದ ನಗರದಲ್ಲಿ ಸಭಾಭವನ ನಿರ್ಮಾಣಗೊಳ್ಳಬೇಕೆಂಬ ಬಹಳ ದಿನಗಳ ಕನಸು ಇಂದು ಸಾಕಾರಗೊಳ್ಳುತ್ತಿರುವುದು ಸಂತೋಷದ ಸಂಗತಿ. ಸಾಸಲು ಮರುಳಸಿದ್ಧಪ್ಪ ಮತ್ತು ಮಕ್ಕಳು ದಾನ ಮಾಡಿದ ವಿಶಾಲ ನಿವೇಶನದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಲ ಭವನ ನಿರ್ಮಾಣಗೊಳಿಸುವ ಉದ್ದೇಶವಿದೆ. ಅವಿನಾಭಾವ ಸಂಬಂಧ ಹೊಂದಿದ ಶ್ರೀ ರಂಭಾಪುರಿ ಪೀಠದ ಸತ್ಕಾರ್ಯಗಳಿಗೆ ಭಕ್ತರ ಸಹಕಾರ ಅವಶ್ಯಕ. ಎಲ್ಲರ ಸಹಕಾರದಿಂದ ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸುವ ಉದ್ದೇಶವಿದೆ ಎಂದರು.

ಸಮಾರಂಭದಲ್ಲಿ ಪಾಲ್ಗೊಂಡ ಶಾಸಕ ಬಿ.ಸಿ.ನಾಗೇಶ ಮಾತನಾಡಿ, ಧರ್ಮ ಪೀಠಗಳ ಮಾರ್ಗದರ್ಶನ ನಮ್ಮೆಲ್ಲರಿಗೆ ಆಶಾಕಿರಣ. ಧಾರ್ಮಿಕ ಕಾರ್ಯಗಳ ಜೊತೆಗೆ ಜನಹಿತಾತ್ಮಕ ಕಾರ್ಯಗಳನ್ನು ರಂಭಾಪುರಿ ಪೀಠ ಮಾಡುತ್ತಾ ಬಂದಿದೆ. ಮಾನವ ಧರ್ಮಕ್ಕೆ ಜಯವಾಗಲೆಂಬ ಉದಾತ್ತ ಸಂದೇಶ ಶ್ರೀ ಪೀಠ ಕೊಟ್ಟಿದೆ. ನಿರ್ಮಾಣಗೊಳ್ಳಲಿರುವ ಮಂಗಲ ಭವನಕ್ಕೆ ಶಾಸಕರ ಅನುದಾನದಲ್ಲಿ ಸಹಕರಿಸುವುದಾಗಿ ತಿಳಿಸಿದರು.

ನೊಣವಿನಕೆರೆ ಕರಿವೃಷಭ ಶಿವಯೋಗಿಶ್ವರ ಸ್ವಾಮಿಗಳು, ದೊಡ್ಡಗುಣಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಹೊನ್ನವಳ್ಳಿ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು. ನಗರಸಭಾಧ್ಯಕ್ಷ ರಾಮಮೋಹನ್‌, ನಗರಸಭಾ ಸದಸ್ಯ ಸಂಗಮೇಶ ಮುಖ್ಯ ಅತಿಥಿಗಳಾಗಿದ್ದರು.

ಮಹೇಶ್ವರಯ್ಯ, ಟಿ.ಎಸ್‌.ಪರಶಿವಯ್ಯ, ಉಮಾಪತಿ, ಎಸ್‌.ಎಂ. ಸರ್ವೇಶ ಸೇರಿದಂತೆ ವೀರಶೈವ ಸಮಾಜದ ಗಣ್ಯರು ಮತ್ತು ದಾನಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಗದಿಗೆಯ್ಯ ಹಿರೇಮಠರಿಂದ ವೇದಘೋಷ, ಗಂಗಾಧರಸ್ವಾಮಿ ಇವರಿಂದ ಭಕ್ತಿಗೀತೆ, ನಂದಕುಮಾರ್‌ ಸ್ವಾಗತಿಸಿ, ತೋಂಟದಾರ್ಯ ನಿರೂಪಿಸಿ, ಎನ್‌. ಬಸವಯ್ಯ ವಂದಿಸಿದರು.

ಟಾಪ್ ನ್ಯೂಸ್

8

Kantara Prequel: ಕೋಟಿ ಕೋಟಿ ಕೊಟ್ಟು ʼಕಾಂತಾರ -1ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ಪ್ರೈಮ್

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

1

ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ

5-uv-fusion

UV Fusion: ಮಾಯಾ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8

Kantara Prequel: ಕೋಟಿ ಕೋಟಿ ಕೊಟ್ಟು ʼಕಾಂತಾರ -1ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ಪ್ರೈಮ್

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

9-sirsi

Sirsi: ರಾಜ್ಯ ಮಟ್ಟದ ಕೃಷಿ ಸಂಬಂಧಿತ ಪ್ರಶಸ್ತಿ ಪ್ರಕಟ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.