ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧ


Team Udayavani, Aug 19, 2021, 6:53 PM IST

19-19

ಚಿಕ್ಕಮಗಳೂರು: ರೈತರು ಸ್ವಾವಲಂಬಿಗಳಾಗಬೇಕು. ಕೃಷಿ ಉತ್ಪಾದನೆ ಹೆಚ್ಚಿಸಿ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ 6 ವರ್ಷಗಳಿಂದ ರೈತಪರವಾದ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದಲ್ಲಿ ತನಗೆ ಕೃಷಿ ಖಾತೆಯಂತಹ ಮಹತ್ವದ ಜವಾಬ್ದಾರಿಯನ್ನು ನೀಡಿದ್ದು, ರೈತರು ಮತ್ತು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ಪ್ರಧಾನಮಂತ್ರಿ ಮೋದಿಯವರು ಯುಪಿಎ ಸರ್ಕಾರದ ಅವಧಿ ಯಲ್ಲಿದ್ದ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಕೃಷಿ ಕ್ಷೇತ್ರಕ್ಕೆ ನೀಡಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿ ಸಂಶೋಧನೆ, ಬಿತ್ತನೆ ಬೀಜಗಳು, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಅನೇಕ ಯೋಜನೆಗಳನ್ನು ರೂಪಿಸಿದೆ. ಆತ್ಮನಿರ್ಭರ, ಕಿಸಾನ್‌ ಸಮ್ಮಾನ್‌, ಫಸಲ್‌ಬಿಮಾ, ಕೃಷಿ ಸಿಂಚಾಯಿ ಸೇರಿದಂತೆ ಅನೇಕ ಯೋಜನೆ ಜಾರಿಗೊಳಿಸಿದ್ದು ರೈತರಿಗೆ ಅನುಕೂಲವಾಗಲಿದೆ ಎಂದರು. ದೇಶಾದ್ಯಂತ ಶೇ.85ರಷ್ಟು ಸಣ್ಣ ಮತ್ತು ಮಧ್ಯಮ ರೈತರು ಇದ್ದು ಕಿಸಾನ್‌ ಸಮ್ಮಾನ್‌ ಯೋಜನೆಯಡಿ 21ಕೋಟಿ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ.

ರೈತರ ಬೆಳೆಹಾನಿ, ವಿಮೆಗೆ ಸಂಬಂ ಧಿಸಿದಂತೆ ಬೆಳೆ ಸಮೀಕ್ಷೆಗೆ ರೈತರಿಗೆ ಅವಕಾಶ ನೀಡಿದ್ದು, ಕೋವಿಡ್‌ ಸಂದರ್ಭದಲ್ಲೂ ಕೃಷಿಕ್ಷೇತ್ರದಲ್ಲಿ ಶೇ.20ರಷ್ಟು ಜಿಡಿಪಿ ಹೆಚ್ಚಿದೆ ಎಂದು ಹೇಳಿದರು. ಆಹಾರ ಪದಾರ್ಥಗಳ ರμ¤ನಲ್ಲಿ ಭಾರತ ದೇಶ 9ನೇ ಸ್ಥಾನದಲ್ಲಿದೆ. ಸಣ್ಣ ಮತ್ತು ಮಧ್ಯಮ ಕಾμ ಬೆಳೆಗಾರರಿಗೆ ಹನಿ ನೀರಾವರಿಗೆ ಸಬ್ಸಿಡಿ ದರದಲ್ಲಿ ನೀಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ ವಿದೇಶಗಳಿಗೆ ರಫ್ತು ಮಾಡಲು ಮುಂದಾಗಲಾಗುವುದು. ಕೃಷಿ ಉತ್ಪಾದಕ ಸಂಘ ಸಂಸ್ಥೆಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಆಹಾರ ಸಂಸ್ಕರಣೆ ಘಟಕ, ಶೀತಸಂಗ್ರಹ ಘಟಕ ಸೇರಿದಂತೆ ಸಣ್ಣ ಮತ್ತು ಮಧ್ಯಮ ರೈತರಿಗೆ ಸಾಲಸೌಲಭ್ಯದ ಮೂಲಕ ಕೃಷಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಆರಂಭಕ್ಕೆ ಚಿಂತನೆ ನಡೆದಿದೆ.

ಹೊಸಕೋಟೆಯಲ್ಲಿ ಸ್ಪೆ çಸ್‌ ಪಾರ್ಕ್‌ ನಿರ್ಮಾಣ ಮಾಡಲು ಜಾಗ ಮೀಸಲಿರಿಸಲಾಗಿದೆ. ರೈತರ ಮತ್ತು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ತರೀಕೆರೆ ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ಜಿಲ್ಲೆ ಮಲೆನಾಡು ಬಯಲುಸೀಮೆ ಒಳಗೊಂಡಂತೆ ಈರುಳ್ಳಿ, ಆಲೂಗಡ್ಡೆ, ಕಾμ, ಅಡಕೆ, ತೆಂಗು ಬೆಳೆಯುವ ರೈತರು, ಬೆಳೆ ಗಾರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಜಿಲ್ಲೆಗೆ ವಿಶೇಷ ಆದ್ಯತೆ ನೀಡಬೇಕು. ತರೀಕೆರೆಯ ಬಾವಿಕೆರೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಆರಂಭಕ್ಕೆ ಚಿಂತನೆ ನಡೆಸಿದ್ದು, ಆದಷ್ಟು ಬೇಗ ಅನುಮೋದನೆ ದೊರಕಿಸಿ ಕಾಮಗಾರಿ ಆರಂಭಿಸುವಂತೆ ತಿಳಿಸಿದರು.

ಬಿಜೆಪಿಯ ಮಹಿಳಾಮೋರ್ಚಾ, ಎಸ್‌ಸಿ. ಮೋರ್ಚಾ, ಒಳಗೊಂಡಂತೆ ವಿವಿಧ ಮೋರ್ಚಾದ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರು ನೂತನ ಕೃಷಿ ಸಚಿವರನ್ನು ಅಭಿನಂದಿಸಿ ಸನ್ಮಾನಿಸಿದರು. ವಿಧಾನಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ಸಮಾಜ ಕಲ್ಯಾ ಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ತರೀಕೆರೆ ಶಾಸಕ ಡಿ.ಎಸ್‌.ಸುರೇಶ್‌, ಕಡೂರು ಶಾಸಕ ಬೆಳ್ಳಿಪ್ರಕಾಶ್‌, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಎಂಎಲ್‌ಸಿ ತುಳಸಿ ಮುನಿರಾಜುಗೌಡ, ಚಿಕ್ಕಮಗಳೂರು ಕಾμಮಂಡಳಿ ಅಧ್ಯಕ್ಷ ಎಂ.ಎಸ್‌. ಭೋಜೆಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ನಗರ ಮಂಡಲ ಅಧ್ಯಕ್ಷ ಮಧುಕುಮಾರ್‌ ರಾಜ್‌ ಅರಸ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್‌, ಪ್ರೇಮ್‌ ಕುಮಾರ್‌, ದೀಪಕ್‌ ದೊಡ್ಡಯ್ಯ, ಸೀತಾರಾಮ ಭರಣ್ಯ ಇದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.