Chikkamagaluru: ಮಳೆಗಾಗಿ 37 ವರ್ಷದ ಹಿಂದಿನ ಆಚರಣೆಗೆ ಮುಂದಾದ ಮಲೆನಾಡಿಗರು…
Team Udayavani, Sep 2, 2023, 9:05 AM IST
ಚಿಕ್ಕಮಗಳೂರು: ಮಲೆನಾಡಿನ ಹೆಬ್ಬಾಗಿಲಿನಲ್ಲೇ ಮಳೆ ಕೈಕೊಟ್ಟಿದೆ. ಮಳೆಗಾಗಿ ಪ್ರಾರ್ಥಿಸಿ ಮಲೆನಾಡಿನ ಜನರು ಹಿಂದಿನ ಸಂಪ್ರದಾಯಕ್ಕೆ ಮಾರು ಹೋಗುತ್ತಿದ್ದಾರೆ. ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕೆಲವು ಗ್ರಾಮಗಳ ಜನತೆ ಹಿಂದಿನ ಸಂಪ್ರದಾಯ ಆಚರಣೆಗೆ ಮುಂದಾಗಿದ್ದಾರೆ.
ನರಸಿಂಹರಾಜಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನತೆ ಮಳೆಗಾಗಿ ಪ್ರಾರ್ಥಿಸಿ ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟ ಹತ್ತುತ್ತಿದ್ದಾರೆ. ಕಳೆದ 37 ವರ್ಷಗಳ ಹಿಂದೆ ಇದೇ ರೀತಿ ಮಳೆ ಅಭಾವ ಉಂಟಾಗಿತ್ತು. ಬರದ ಛಾಯೆ ಮೂಡಿತ್ತು.
ಇಂತಹ ವೇಳೆಯಲ್ಲಿ ಇಲ್ಲಿನ ಜನರು ಬೆಟ್ಟ ಹತ್ತಿ ದೇವರದಲ್ಲಿ ಪ್ರಾರ್ಥಿಸಿದ್ದರು. ಗಂಗೇಗಿರಿ ಬೆಟ್ಟ ಹತ್ತಿ ಅಲ್ಲಿ ಪೂಜೆ ಸಲ್ಲಿಸಿದರೇ ಮಳೆ ಬರುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.
ಗಿರಿಯಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಳಸದಲ್ಲಿ ಅಲ್ಲಿನ ನೀರು ತಂದು, ಪೂಜೆ ಮಾಡಬೇಕು. 9 ದಿನಗಳ ಕಾಲಮಡಿಯಿಂದ ಇದ್ದು ಪೂಜೆ ಮಾಡಬೇಕು ಎಂಬ ಪ್ರತೀತಿ ಇದ್ದು, ಮಳೆಯಾಗುತ್ತದೆ ಎಂಬ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಜನರು ಮಳೆಗಾಗಿ ಪ್ರಾರ್ಥಿಸಿ ಬೆಟ್ಟ ಏರುತ್ತಿದ್ದಾರೆ.
ಈ ವರ್ಷ ಮಳೆ ಕೈಕೊಟ್ಟಿದೆ. ಮಲೆನಾಡಿನಲ್ಲೇ ಮಳೆ ಕೊರತೆ ಉಂಟಾಗಿದ್ದು, ಜನರು ಆತಂಕಕ್ಕೆ ಒಳಗಾಗಿ ದ್ದಾರೆ. ಬಿತ್ತಿದ ಬೆಳೆ ಕೈ ಸೇರುತ್ತೋ ಇಲ್ಲವೋ ಎಂಬ ಆತಂಕ ಮನೆ ಮಾಡಿದ್ದು, ಹಿಂದಿನ ಸಂಪ್ರದಾಯ ಗಳ ಕಡೆ ಮುಖ ಮಾಡಿದ್ದಾರೆ.
ಇದನ್ನೂ ಓದಿ: Aditya L1 Sun Mission: ಚಂದ್ರಯಾನ- 3 ಯಶಸ್ಸಿನ ಬೆನ್ನಲ್ಲೇ ಸೂರ್ಯನತ್ತ ಮುಖ ಮಾಡಿದ ISRO
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ