ತಾಪಂ ಅಧ್ಯಕ್ಷರಿಗೆ ಸನ್ಮಾನ ಸಮಾರಂಭ
ತಾಪಂನಲ್ಲಿ ಕುರುಹಿನಶೆಟ್ಟಿ ಮಹಿಳಾ ಸಂಘದ ವತಿಯಿಂದ ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಅವರನ್ನು ಅಭಿನಂದಿಸಲಾಯಿತು.
Team Udayavani, Feb 7, 2021, 5:28 PM IST
ಚಿಕ್ಕಮಗಳೂರು: ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಅವರು ಕುರುಹಿನಶೆಟ್ಟಿ ಸಮುದಾಯದ ಏಳಿಗೆಗೆ ಶ್ರಮಿಸುವಂತೆ ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ ಅಧ್ಯಕ್ಷೆ ಪುಷ್ಪಾ ರಾಜೇಂದ್ರ ಹೇಳಿದರು.
ಶನಿವಾರ ನಗರದ ತಾಪಂನಲ್ಲಿ ಕುರುಹಿನ ಶೆಟ್ಟಿ ಮಹಿಳಾ ಸಂಘದಿಂದ ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಅವರನ್ನು ಅಭಿನಂದಿಸಿ ಅವರು
ಮಾತನಾಡಿದರು. ಶಾಸಕ ಸಿ.ಟಿ. ರವಿ ಅವರು ಸಮುದಾಯವನ್ನು ಗುರುತಿಸಿ ತಾಪಂ ಅಧ್ಯಕ್ಷಸ್ಥಾನ ದೊರೆಯುವಂತೆ ಮಾಡಿದ್ದಾರೆ. ಈ ನಿಟ್ಟಿನಲ್ಲ ಅಧ್ಯಕ್ಷರು ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ಮೂಲಕ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಗಳನ್ನು ದೊರೆಯುವಂತೆ ಮಾಡಬೇಕು ಎಂದರು.
ತಾಪಂ ಅಧ್ಯಕ್ಷೆ ದಾಕ್ಷಾಯಿಣಿ ಪೂರ್ಣೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಸ್ಥಾನಮಾನಗಳು ಲಭಿಸುತ್ತಿವೆ. ಎಲ್ಲರ ಸಹಕಾರದಿಂದ ಕುರುಹಿನಶೆಟ್ಟಿ ಸಮುದಾಯದ ಏಳಿಗೆಗೆ ಶ್ರಮಿಸುವುದಾಗಿ ತಿಳಿಸಿದರು.
ಕುರುಹಿನ ಶೆಟ್ಟಿ ಮಹಿಳಾ ಸಂಘದ ನಿರ್ದೇಶಕರಾದ ತನುಜಾ ಶಿವಶಂಕರ್, ಚಂದ್ರಾವತಿ ಶಂಕರ್, ಪದ್ಮಾ ಮಹೇಶ್, ಕವಿತಾ ಹಾಲಪ್ಪ, ಕಲಾ ದಾನಪ್ಪ, ಪ್ರತಿಮಾ ಗಿರೀಶ್, ವಿನುತಾ ಪ್ರಭಾಕರ್, ಚಂದ್ರಿಕಾ ತಿಮ್ಮಶೆಟ್ಟಿ, ಪ್ರತಿಮಾ ವೆಂಕಟೇಶ್, ಸೀಮಾ ವಿಶ್ವನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ