ಮಾನಸಿಕ ಅಸ್ವಸ್ಥನನ್ನು ಅನಾಥಾಶ್ರಮಕ್ಕೆ ದಾಖಲಿಸಿ ಮಾನವೀಯತೆ ಮೆರೆದ್ರು..
ಬಾಳೆಹೊನ್ನೂರು: ಮಾನಸಿಕ ಅಸ್ವಸ್ಥನನ್ನು ಅನಾಥಾಶ್ರಮಕ್ಕೆ ದಾಖಲಿಸಿರುವುದು.
Team Udayavani, Feb 21, 2021, 5:57 PM IST
ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿ ಬಿದರೆ ಗ್ರಾಮದಲ್ಲಿ ತಿರುಗಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಮಾನಸಿಕ ಅಸ್ವಸ್ಥ
ಯುವಕನೋರ್ವನನ್ನು ಖಾಂಡ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಕಳಸ ಸಮೀಪದ ಅನಾಥಾಶ್ರಮಕ್ಕೆ ದಾಖಲಿಸಿದ ಘಟನೆ ನಡೆದಿದೆ.
ಬಿದರೆ ಗ್ರಾಮದಲ್ಲಿ ತಿರುಗಾಡುತ್ತಿದ್ದ ಈ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಆತನ ಬಗ್ಗೆ ಅನುಮಾನಗೊಂಡು ಖಾಂಡ್ಯದ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕ ಬಿದರೆ ರಘುಪತಿ ಅವರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅವರು ಆವ್ಯಕ್ತಿಯನ್ನು ಗಮನಿಸಿ ವಿಚಾರಿಸಿ ಊಟ ನೀಡುತ್ತಿದ್ದರು.
ಈ ಬಗ್ಗೆ ಕಡಬಗೆರೆ ಚಂದ್ರಶೇಖರ್ ರೈ ಅವರೊಂದಿಗೆ ಚರ್ಚಿಸಿದ ರಘುಪತಿ ಅವರು ಅಂತಿಮವಾಗಿ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ದೇವರಗುಡ್ಡದಲ್ಲಿನ ದಿವ್ಯ ಕಾರುಣ್ಯಾಲಯ ಅನಾಥಾಶ್ರಮಕ್ಕೆ ಸೇರಿಸಲಾಗಿದೆ. ದಿವ್ಯ ಕಾರುಣ್ಯಾಲಯದ ಬಿಬಿನ್ ಜೋಸ್ ಅವರು ಆ ವ್ಯಕ್ತಿಯನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ. ಕಳಸದ ಸಿ. ಅಶೋಕ್ ಕುಮಾರ್, ಮೃತ್ಯುಂಜಯ ಆಚಾರ್, ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸುಧಾಕರ್ ಮತ್ತಿತರರು ಸಹಕಾರ ನೀಡಿದ್ದಾರೆ ಎಂದು ಬಿದರೆ ರಘುಪತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ