ಸ್ಫೋಟ ಪ್ರಕರಣ ಗಂಭೀರತೆ ಅರಿಯಲಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ
Team Udayavani, Jan 25, 2021, 6:12 PM IST
ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲೆ ಹುಣಸೋಡು ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣ ಅಪಾಯಕಾರಿ ಬೆಳವಣಿಗೆ. ಇಂದು ಕಲ್ಲುಕ್ವಾರಿ, ನಾಳೆ ಭಯೋತ್ಪಾದಕರ ಕೈಗೆ ಸ್ಪೋಟಕ ಸಿಕ್ಕರೆ? ಇದೇ ಮಾದರಿಯ ಸ್ಫೋಟ ಜನವಸತಿ ಪ್ರದೇಶದಲ್ಲಿ ನಡೆದಿದ್ದರೆ ಆಗುವ ಹಾನಿಯ ಬಗ್ಗೆ ಆಲೋಚನೆ ಮಾಡಬೇಕು. ಹಾಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಂದ ಸ್ಪೋಟಕ ಬಂತು, ಹೇಗೆ ಬರುತ್ತದೆ, ಕಲ್ಲುಕ್ವಾರಿ ನಡೆಸಲು ಪರವಾನಗಿ ಇತ್ತೋ, ಇಲ್ಲವೋ ಇದೆಲ್ಲದರ ಬಗ್ಗೆ ವ್ಯಾಪಕ ತನಿಖೆಯಾಗಬೇಕು. ಈಗಾಗಲೇ ತನಿಖೆ ನಡೆಸುವುದಾಗಿ ಸಿಎಂ ಹೇಳಿದ್ದು, ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಬಹುದು. ಅವರ ಜೀವ ತರಲು ಸಾಧ್ಯವಿಲ್ಲ. ಮುಂದೆ ಇಂತಹ ಅನಾಹುತ ಆಗದಂತೆ ಎಚ್ಚರ ವಹಿಸಬೇಕು. ಅಕ್ರಮ ಗಣಿಗಾರಿಕೆ ಪತ್ತೆ ಹಚ್ಚಿ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತಕ್ಕೆ ಜವಾಬ್ದಾರಿ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ