ಅಂತರ್ಜಾತಿ ವಿವಾಹಿತರಿಗೆ ಚೆಕ್ ವಿತರಣೆ
Team Udayavani, Apr 14, 2021, 6:00 PM IST
ಕಡೂರು: ತಾಲೂಕಿನ ಆಲಘಟ್ಟ ಚಟ್ನಹಳ್ಳಿಯ ಯುವಕ ಭರತ್ ಸಿ.ಕೆ. ಮತ್ತು ಉಡೆವು ಗ್ರಾಮದ ದಿವ್ಯ ಆರ್. ಅವರು ಅಂತರ್ಜಾತೀಯ ವಿವಾಹ ಮಾಡಿಕೊಂಡ ಹಿನ್ನೆಲೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ನೀಡುವ 3 ಲಕ್ಷದ ಸಹಾಯ ಧನದ ಚೆಕ್ನ್ನು ಶಾಸಕ ಬೆಳ್ಳಿಪ್ರಕಾಶ್ ವಿತರಣೆ ಮಾಡಿದರು.
ಚೆಕ್ ವಿತರಿಸಿ ಮಾತನಾಡಿದ ಶಾಸಕ ಬೆಳ್ಳಿಪ್ರಕಾಶ್ ಅವರು ಸರ್ಕಾರ ನೀಡುವ ಸಹಾಯಧನವನ್ನು ನಿಮ್ಮ ಜೀವನ ನಿರ್ವಹಣೆ ಅಥವಾ ಉತ್ತಮ ಕೆಲಸ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳಿ ಎಂದು ಯುವ ಜೋಡಿಗೆ ಕರೆ ನೀಡಿ ಆಶೀರ್ವದಿಸಿದರು.
ತಾಲೂಕು ಸಮಾಜ ಕಲ್ಯಾಣಾ ಧಿಕಾರಿ ಶಂಕರಮೂರ್ತಿ ಮಾತನಾಡಿ, ಕಳೆದ ಸಾಲಿನಲ್ಲಿ ಸುಮಾರು 51 ಅಂತರ್ಜಾತಿ ವಿವಾಹಗಳು ನೊಂದಣಿಯಾಗಿದ್ದು ಎಲ್ಲರಿಗೂ ಸರ್ಕಾರದಿಂದ ಸೌಲಭ್ಯಗಳನ್ನು ನೀಡಲಾಗಿದೆ. ಈ ಬಾರಿ 38 ಅಂತರ್ಜಾತೀಯ ವಿವಾಹಗಳು ನಡೆದಿದ್ದು ಭರತ್ ಮತ್ತು ದಿವ್ಯ ಅವರ ಜೋಡಿಗೆ 3 ಲಕ್ಷ ರೂ. ಸಹಾಯಧನ ಮಂಜೂರಾಗಿದ್ದು 1.5 ಲಕ್ಷ ನಗದು, ಉಳಿದ 1.5 ಲಕ್ಷ ಕೆನರಾ ಬ್ಯಾಂಕಿನಲ್ಲಿ ಇವರಿಬ್ಬರ ಹೆಸರಿನಲ್ಲಿ ಠೇವಣಿಯಾಗಿ ಇಡಲಾಗಿದೆ. 3 ವರ್ಷ ಮುಗಿದ ನಂತರ ಠೇವಣಿ ಹಣ ಅವರು ಪಡೆಯಲು ಸಾಧ್ಯವಿದೆ ಎಂದರು. ಜಿಪಂ ಸದಸ್ಯ ಕೆ.ಆರ್. ಮಹೇಶ್ ಒಡೆಯರ್, ಪಾಟೀಲ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು