ಮುಷ್ಕರದಲ್ಲೂ 126 ಬಸ್‌ ಸಂಚಾರ


Team Udayavani, Apr 18, 2021, 6:34 PM IST

18-21

ಚಿಕ್ಕಮಗಳೂರು: ಜಿಲ್ಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿರುವ ಮಧ್ಯೆಯೇ ಶನಿವಾರ ವಿವಿಧ ಡಿಪೋಗಳ ಸುಮಾರು 126 ಸರ್ಕಾರಿ ಸಾರಿಗೆ ಬಸ್‌ ಗಳು ರಸ್ತೆಗಿಳಿದು ಜಿಲ್ಲೆಯಲ್ಲಿ ಸಂಚಾರ ಆರಂಭಿಸಿವೆ. ಸರ್ಕಾರಿ ಸಾರಿಗೆ ಬಸ್‌ ಗಳ ಸಂಚಾರದಿಂದಾಗಿ ಖಾಸಗಿ ಸಾರಿಗೆ ಬಸ್‌ ಮಾಲೀಕರು ನಿರಾಶರಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿ ಕಾರಿಗಳ ಜತೆ ಮಾತಿನ ಚಕಮಕಿ ನಡೆಸಿದ ಘಟನೆ ಶನಿವಾರ ನಗರದಲ್ಲಿ ನಡೆದಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 10 ದಿನಗಳಿಂದ ಕೆಲಸ ಸ್ಥಗಿತಗೊಳಿಸಿ ಮುಷ್ಕರದಲ್ಲಿ ನಿರತರಾಗಿದ್ದು, ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ದಿನದಿಂದ ದಿನಕ್ಕೆ ಮುಷ್ಕರದ ಕಾವು ಕಡಿಮೆಯಾಗುತ್ತಿದ್ದು, ಶನಿವಾರ ಚಿಕ್ಕಮಗಳೂರು ಡಿಪೋದ 26 ಬಸ್‌ಗಳು ಸೇರಿದಂತೆ ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ವಿಭಾಗದ ಮೂಡಿಗೆರೆ, ಅರಸೀಕೆರೆ, ಬೇಲೂರು, ಸಕಲೇಶಪುರ ಡಿಪೋಗೆ ಸೇರಿದ ಸುಮಾರು 126 ಕೆಎಸ್‌ಆರ್‌ ಟಿಸಿ ಬಸ್‌ಗಳು ಜಿಲ್ಲೆಯಲ್ಲಿ ಸಂಚಾರ ಆರಂಭಿಸಿವೆ.

ಮುಷ್ಕರ ನಿರತ ನೌಕರರ ಪೈಕಿ ಕೆಲ ನೌಕರರು ಒಬ್ಬೊಬ್ಬರಾಗಿ ಕೆಲಸಕ್ಕೆ ಹಾಜರಾಗುತ್ತಿದ್ದು, ಕಳೆದ 10 ದಿನಗಳಿಂದ ಜಿಲ್ಲಾದ್ಯಂತ ಅಸ್ತವ್ಯಸ್ತಗೊಂಡಿದ್ದ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆ ಸೋಮವಾರ ಯಥಾಸ್ಥಿತಿಗೆ ಮರಳಲಿದೆ ಎಂದು ಸಂಸ್ಥೆಯ ಅಧಿ  ಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ಬೆಳಗ್ಗೆ ಎಂದಿನಂತೆ ಖಾಸಗಿ ಸಾರಿಗೆ ಬಸ್‌ಗಳು ಸೇರಿದಂತೆ ಇತರ ಸಾರಿಗೆ ವಾಹನಗಳು ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಜಮಾಯಿಸಿದ್ದವು.

ಬೆಂಗಳೂರು ನಗರದಿಂದ ಕೆಲ ಬಸ್‌ಗಳು ಚಿಕ್ಕಮಗಳೂರು ನಗರಕ್ಕೆ ಪ್ರಯಾಣಿಕರನ್ನು ಕರೆತಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಹಿಂದಿರುಗಲು ಸಜ್ಜಾಗಿದ್ದವು. ಆದರೆ ಚಿಕ್ಕಮಗಳೂರು ಡಿಪೋದ ಸುಮಾರು 10 ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ದಾಣಕ್ಕೆ ಆಗಮಿಸಿದವು. ಖಾಸಗಿ ಬಸ್‌ಗಳಲ್ಲಿ ಕುಳಿತಿದ್ದ ಪ್ರಯಾಣಿಕರು ಕೆಳಗಿಳಿದು ಕೆಎಸ್‌ಆರ್‌ಟಿಸಿ ಬಸ್‌ ಗಳನ್ನೇರಿ ಕುಳಿತರು. ಇದರಿಂದ ಸ್ಥಳದಲ್ಲಿದ್ದ ಖಾಸಗಿ ಸಾರಿಗೆ ಬಸ್‌ಗಳ ಚಾಲಕರು, ನಿರ್ವಾಹಕರು ಕೆಎಸ್‌ ಆರ್‌ಟಿಸಿ ಅ ಧಿಕಾರಿಗಳ ಬಳಿ ವಾಗ್ವಾದ ನಡೆಸಿದರು. ಕೆಎಸ್‌ಆರ್‌ಟಿಸಿ ಎಚ್‌.ಟಿ. ವೀರೇಶ್‌ ಡಿಸಿ ಬಳಿ ಮಾತುಕತೆಗೆ ಮುಂದಾದರು.

ಸರ್ಕಾರಿ ಸಾರಿಗೆ ಬಸ್‌ಗಳ ಮಾರ್ಗದಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳೂ ಸಂಚಾರ ನಡೆಸಬಹುದು. ಖಾಸಗಿಯವರಿಗಾಗಿ ಸರ್ಕಾರಿ ಸಾರಿಗೆ ಬಸ್‌ಗಳ ಸೇವೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಖಾಸಗಿ ಬಸ್‌ ಮಾಲೀಕರ ಸಂಘದವರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂದಿರುಗಿದರು. ನಂತರ ಸರ್ಕಾರಿ ಬಸ್‌ಗಳು ತಮ್ಮ ಮಾರ್ಗದಲ್ಲಿ ಸಾರಿಗೆ ಸೇವೆ ಆರಂಭಿಸಿದರೆ ಖಾಸಗಿ ಬಸ್‌ಗಳು ಎಂದಿನಂತೆ ಸಾರಿಗೆ ಸೇವೆ ಮುಂದುವರಿಸಿದರು. ಜಿಲ್ಲಾದ್ಯಂತ ಸುಮಾರು 126 ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಸಂಚಾರ ಆರಂಭಿಸಿದವು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.