ಕೊರೊನಾ ನಿಯಂತ್ರಣಕ್ಕೆ ದೇವರ ಮೇಲೆ ಭಾರ ಹಾಕಿದ ಸಚಿವ
Team Udayavani, Apr 21, 2021, 6:32 PM IST
ಶೃಂಗೇರಿ: ನಾನು ವೈಜ್ಞಾನಿಕ ಶಕ್ತಿಯೊಂದಿಗೆ ದೈವೀ ಶಕ್ತಿಯನ್ನೂ ನಂಬುತ್ತೇನೆ. ಶ್ರೀ ಶಾರದಾ ಪೀಠದ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ಹೀಗಾಗಿಯೇ ದೇವರಲ್ಲಿ ಪ್ರಾರ್ಥಿಸಿಕೊಳ್ಳುವ ಉದ್ದೇಶದಿಂದ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಆರೋಗ್ಯ ಸಚಿವ ಡಾ| ಸುಧಾಕರ್ ಹೇಳಿದರು.
ಮಂಗಳವಾರ ಬೆಂಗಳೂರಿನಿಂದ ಶೃಂಗೇರಿಗೆ ಆಗಮಿಸಿದ ಅವರು, ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳ ವರ್ಧಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುವ ಕಾರ್ಯಕ್ರಮವಿತ್ತು. ಕೊರೊನಾ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದ್ದು, ಸರ್ಕಾರದ ಪರವಾಗಿ ತಾವು ಬಂದಿದ್ದು, ಲೋಕ ಕಲ್ಯಾಣಕ್ಕಾಗಿ ಇಲ್ಲಿ ನಡೆಯುತ್ತಿರುವ ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ದೇಶಕ್ಕೆ ಕೊರೊನಾದಿಂದ ಮುಕ್ತಿ ದೊರಕಲಿ ಎಂದು ದೇವಿಯನ್ನು ಬೇಡಿಕೊಳ್ಳುತ್ತಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಯುವಕ ಆಕ್ಸಿಜನ್ ಇಲ್ಲದೇ ಮೃತಪಟ್ಟ ಪ್ರಕರಣ ಸೇರಿದಂತೆ ಒಂದೆರಡು ಪ್ರಕರಣಗಳು ಸಂಭವಿಸಿರಬಹುದು. ಕೊರೊನಾ ಪ್ರಕರಣ ಏರುತ್ತ ಹೋದರೆ ಆಕ್ಸಿಜನ್ ಬೇಡಿಕೆಯೂ ಹೆಚ್ಚಾಗಲಿದೆ. 1200-1500 ಮೆಟ್ರಿಕ್ ಟನ್ ಆಕ್ಸಿಜನ್ಗೆ ಪ್ರಸ್ತಾವನೆ ಇದೆ. ಈಗಾಗಲೇ ಕೇಂದ್ರ ಸರ್ಕಾರ 300 ಮೆಟ್ರಿಕ್ ಟನ್ ಒದಗಿಸಿದೆ. ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಂಗಳಿದ್ದು, ಸಣ್ಣ ಆಸ್ಪತ್ರೆಯಲ್ಲಿ ಕಡಿಮೆ ಸೌಲಭ್ಯವಿರುತ್ತದೆ. ಅಲ್ಲಿ ತಲೆದೋರುವ ತಾಂತ್ರಿಕ ಸಮಸ್ಯೆ ನಿವಾರಿಸಲಾಗುತ್ತದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಬದ್ಧವಾಗಿದ್ದು, ಎಲ್ಲ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ