ಚಿಕ್ಕಮಗಳೂರು: ಭಾರಿ ಮಳೆಗೆ ಮತ್ತೊಂದು ಮೃತ್ಯು ; ಜನಜೀವನ ಅಸ್ತವ್ಯಸ್ತ
ನಿರಂತರವಾಗಿ ಸುರಿಯುತ್ತಿರುವ ಮಳೆ , ಲಾರಿ ಮೇಲೆ ಬಿದ್ದ ಬೃಹತ್ ಮರ
Team Udayavani, Jul 19, 2023, 6:32 PM IST
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಬುಧವಾರ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ.
ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದು ವೃದ್ಧೆ ಸಾವನ್ನಪ್ಪಿದ್ದಾರೆ. ರಭಸವಾಗಿ ಹರಿಯುತ್ತಿದ್ದ ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ದಾರದಹಳ್ಳಿ ಗ್ರಾಮದ ದೇವಮ್ಮ (61 ) ಶವ ಪತ್ತೆಯಾಗಿದೆ. ದಡದಲ್ಲಿ ಸಿಲುಕಿದ್ದ ಶವವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಾರಿ-ಚಾಲಕ ಜಸ್ಟ್ ಮಿಸ್
ಚಲಿಸುತ್ತಿದ್ದ ಲಾರಿ ಮೇಲೆ ಬೃಹತ್ ಮರ ಬಿದ್ದ ಘಟನೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಚೆಕ್ ಪೋಸ್ಟ್ ಬಳಿ ನಡೆದಿದೆ. ಮರ ಬಿದ್ದ ಕಾರಣ ಲಾರಿ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಮರದ ಪಕ್ಕದಲ್ಲಿದ್ದ ಲೈಟ್ ಕಂಬವಿತ್ತು. ತತ್ ಕ್ಷಣ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಅನಾಹುತ ತಪ್ಪಿ ಹೋಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಕೆರೆಕಟ್ಟೆ ಯಲ್ಲಿ ಘಟನೆ ನಡೆದಿದೆ.
ಮನೆ ಪಕ್ಕದ ತಡೆ ಗೋಡೆ ಕುಸಿತ
ಕಳಸ ತಾಲೂಕಿನ ಓಣಿಗಂಡಿಯ ಡೊಂಗ್ರೆ ಅವರ ಮನೆಯ ಪಕ್ಕದ ತಡೆಗೋಡೆ ನಿರಂತರ ಮಳೆಯಿಂದ ಕುಸಿದಿದ್ದು, ಮನೆಯ ಪಕ್ಕದಲ್ಲಿ ಭೂಮಿ ನಿಧಾನವಾಗಿ ಬಿರುಕು ಬಿಡುತ್ತಿದೆ. ಸ್ಥಳಕ್ಕೆ ಕಳಸ ಗ್ರಾಮ ಪಂಚಾಯಿತ್ ಸದಸ್ಯರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಣ್ಣು ಜರಿದ ಜಾಗಕ್ಕೆ ಟಾರ್ಪಲ್ ಮುಚ್ಚಲಾಗಿದೆ. ಇನ್ನು ಎರಡು ಅಡಿ ಮಣ್ಣು ಜರುಗಿದರೆ ಮನೆ ಕುಸಿಯುವ ಭೀತಿ ಎದುರಾಗಿದೆ.
ಮಂಗಳವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ