ಪೌರತ್ವ ಕಾಯ್ದೆಯಿಂದ ಯಾರಿಗೂ ತೊಂದರೆಯಿಲ್ಲ
Team Udayavani, Jan 13, 2020, 5:05 PM IST
ಚಿಕ್ಕಮಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ನಾಗರಿಕರಿಗೆ ಯಾವುದೇ ಆತಂಕ ಇಲ್ಲ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.
ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದಲ್ಲಿ ಪೌರತ್ವ ಕಾಯ್ದೆ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ನಾಗರಿಕರಿಗೆ ಯಾವುದೇ ಆತಂಕ ಇಲ್ಲ. ಅದು ಪಾಕಿಸ್ತಾನ, ಅಪಘಾನಿಸ್ಥಾನ ಹಾಗೂ ಬಾಂಗ್ಲಾದೇಶದಲ್ಲಿರುವ ಹಿಂದೂ, ಕ್ರೈಸ್ತ, ಸಿಖ್ ಮತ್ತು ಬೌದ್ಧ ಧರ್ಮದ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವ ಹಾಗೂ ಭಾರತದಲ್ಲಿ ಅವರಿಗೆ ಪೌರತ್ವ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ಕಾಯ್ದೆಯಾಗಿದೆ. ಆದರೆ ವಿರೋಧ ಪಕ್ಷಗಳು ಕುತಂತ್ರದಿಂದ ದೇಶದ ನಾಗರಿಕರಿಗೆ ತಪ್ಪು ಮಾಹಿತಿ ರವಾನೆ ಮಾಡಿ ಈ ಕಾಯ್ದೆ ವಿರುದ್ಧ ಹೋರಾಟ ಮಾಡುವಂತೆ ಪ್ರೇರಣೆ ನೀಡುತ್ತಿದ್ದಾರೆ. ಕಾಯ್ದೆಯ ನಿಜವಾದ ಮೂಲ ಉದ್ದೇಶಗಳನ್ನು ಸ್ಪಷ್ಟವಾಗಿ ತಿಳಿಸುವ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರತಿ ಮನೆ ಮನೆಗಳಿಗೂ ತೆರಳಿ ಕಾಯ್ದೆ ಉದ್ದೇಶಗಳನ್ನು ತಿಳಿಸಲಾಗುವುದು ಎಂದರು.
ಬಿಜೆಪಿ ಮುಖಂಡ ಜಾವಳಿ ಪರೀಕ್ಷಿತ್ ಅವರು, ಕಾಂಗ್ರೆಸ್ ಹಾಗೂ ಇತರೆ ವಿರೋಧ ಪಕ್ಷಗಳು ದೇಶದಲ್ಲಿ ಅರಾಜಕತೆ ಉಂಟು ಮಾಡುವ ಉದ್ದೇಶದಿಂದ ಅನಾವಶ್ಯಕವಾಗಿ ಜನರನ್ನು ರೊಚ್ಚಿಗೇಳುವಂತೆ ಪ್ರೇರಣೆ ನೀಡುತ್ತಿದ್ದಾರೆ. ದೇಶಾದ್ಯಂತ ಉಂಟಾದ ಗಲಭೆಯಲ್ಲಿ ಬಲಿಪಶುಗಳಾಗುತ್ತಿರುವುದು ಜನಸಾಮಾನ್ಯರೇ ಹೊರತು ಅಶಾಂತಿ ಉಂಟು ಮಾಡುತ್ತಿರುವ ಮುಖಂಡರಲ್ಲ. ಕಾಂಗ್ರೆಸ್ ಹಾಗೂ ಅಂಗಪಕ್ಷಗಳು ದೇಶದಲ್ಲಿ ಶಾಂತಿ ಕದಡುವ ದುಸ್ಸಾಹಸಕ್ಕೆ ಕೈ ಹಾಕುತ್ತಿವೆ. ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಪ್ರತಿಫಲ ಅನುಭವಿಸಲೇಬೇಕಾಗುತ್ತದೆ ಎನ್ನುವ ಸಾಮಾನ್ಯ ಪರಿಜ್ಞಾನವೂ ಕೂಡ ಇಲ್ಲದೆ ಅಲ್ಪ ಸಂಖ್ಯಾತರನ್ನು ದಾರಿ ತಪ್ಪಿಸುತ್ತಿವೆ. ಕಾಯ್ದೆಯ ಮೂಲ ಉದ್ದೇಶ, ಅದರಲ್ಲಿ ಅಡಕವಾಗಿರುವ ಮೂಲಾಂಶಗಳು ಹೀಗೆ ಹಲವು ಮಾಹಿತಿಗಳನ್ನು ಒಳಗೊಂಡಂತೆ ಎಲ್ಲಾ ವಿಚಾರಗಳನ್ನು ಸಾರ್ವಜನಿಕರ ಮುಂದಿಡುವ ಉದ್ದೇಶದಿಂದ ಈ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಿಜೆಪಿ ಮುಖಂಡರಾದ ಶಶಿಧರ್, ಕೃಷ್ಣ ಟೈಲರ್, ಮೇಗೂರು ಸುನೀಲ್, ನರೇಂದ್ರ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು