ಡಿಸಿ ಕಚೇರಿ ಕಾಮಗಾರಿ ಸಮಸ್ಯೆ ಶೀಘ್ರ ಇತ್ಯರ್ಥ: ರವಿ
Team Udayavani, Jul 3, 2020, 4:15 PM IST
ಚಿಕ್ಕಮಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಕಾಮಗಾರಿಯ ಭೂ ವಿವಾದವನ್ನು ಬಗೆಹರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.
ಬುಧವಾರ ನಗರದ ಪವಿತ್ರವನ ಸಮೀಪದಲ್ಲಿರುವ ಕಟ್ಟಡ ಕಾಮಗಾರಿ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದಿನ ಸರ್ಕಾರದ ಆತುರದ ನಿರ್ಧಾರ ಮತ್ತು ಕಾಮಗಾರಿ ಜಾಗ ವಿವಾದದಿಂದ ಕಾಮಗಾರಿ ವಿಳಂಬವಾಗಿದ್ದು, ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಿದೆ ಎಂದರು.
ಅಂದಿನ ಜಿಲ್ಲಾಧಿಕಾರಿ ಸರ್ಕಾರದ ಅಣತಿಯಂತೆ ಕುಣಿದಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ಅಂದೇ ಸಮಸ್ಯೆಯ ಮುನ್ಸೂಚನೆ ನೀಡಿದ್ದರೂ ಅಂದಿನ ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವ ಮಾಲೀಕನಿಗೆ ಪರ್ಯಾಯವಾಗಿ ಎರಡು ಎಕರೆ ಜಮೀನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಸದ್ಯ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಂಕೀರ್ಣ ಕಟ್ಟಡ ನಗರದ ಹೊರವಲಯದಲ್ಲಿದ್ದು, ನಗರದ ಮಧ್ಯೆ ಇರುವ ತೋಟಗಾರಿಕೆ ಇಲಾಖೆ 11 ಎಕರೆ ಜಾಗದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗುವುದು. ತಾಂತ್ರಿಕವಾಗಿ ಕಾರ್ಯಗತವಾದಲ್ಲಿ ನನೆಗುದಿಗೆ ಬಿದ್ದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ