ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ
Team Udayavani, Jun 6, 2020, 12:32 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ದೃಢವಾಗಿದ್ದ 18 ಕೋವಿಡ್-19 ಪ್ರಕರಣಗಳ ಪೈಕಿ ಎರಡು ಪ್ರಕರಣಗಳು ನೆಗೆಟಿವ್ ಆಗಿದ್ದು, ಹೀಗಾಗಿ ಜಿಲ್ಲೆ ಈಗ ಸೋಂಕು ಮುಕ್ತವಾಗಿದೆ.
ಉಳಿದ 16 ಮಂದಿ ಕೋವಿಡ್-19 ಸೋಂಕಿತರಲ್ಲಿ ಕಳೆದ ವಾರ ಎಂಟು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಶನಿವಾರ ಉಳಿದ ಸೋಂಕಿತರೂ ಗುಣಮುಖರಾಗಿದ್ದು ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಎಲ್ಲಾ 16 ಮಂದಿ ಸೋಂಕಿತರು ಹೊರರಾಜ್ಯಗಳಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು 17 ವರ್ಷಕ್ಕಿಂತ ಕೆಳಗಿನವರಾಗಿದ್ದರು.
ಇದೀಗ ಎಲ್ಲ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೋವಿಡ್-19 ಸೋಂಕಿತರ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮತ್ತೆ ಕೋವಿಡ್ ಸೋಂಕು ಮುಕ್ತವಾದಂತಾಗಿದೆ. ಇದರಿಂದಾಗಿ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ