ಚಿಕ್ಕಮಗಳೂರು ಜಿಲ್ಲೆಗೂ ವ್ಯಾಪಿಸಿದ ಮಂಗನ ಕಾಯಿಲೆ
ಮೂವರ ಕಾರ್ಮಿಕರಲ್ಲಿ ಮಂಗನ ಕಾಯಿಲೆ ದೃಢ
Team Udayavani, Feb 10, 2020, 8:39 PM IST
ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲೆ ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡ ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮೂವರು ತೋಟದ ಕಾರ್ಮಿಕರಲ್ಲಿ ಮಂಗನ ಕಾಯಿಲೆ ವೈರಾಣು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ. ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಡಬೂರು ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಒಬ್ಬರು ಮತ್ತು ಮಧ್ಯಪ್ರದೇಶ ಮೂಲದ ಇಬ್ಬರಲ್ಲಿ ಮಂಗನ ಕಾಯಿಲೆ ಲಕ್ಷಣ ಕಂಡು ಬಂದಿದೆ. ಇವರಿಗೆ ಚಿಕಿತ್ಸೆ ನೀಡಿ, ಗುಣಮುಖರಾಗಿದ್ದು ಆದರೂ ನಿಗಾ ಇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪ್ರಭು ತಿಳಿಸಿದ್ದಾರೆ.