Chikkamagaluru Protest: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್; ರೈತ ಸಂಘದಿಂದ ಪ್ರತಿಭಟನೆ
Team Udayavani, Oct 19, 2023, 2:48 PM IST
ಚಿಕ್ಕಮಗಳೂರು: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್ ಹಿನ್ನೆಲೆ ಇಲ್ಲಿನ ಮೆಸ್ಕಾಂ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸಂಪೂರ್ಣ ಬರಗಾಲಕ್ಕೆ ತುತ್ತಾಗಿದೆ, ಜಲಾಶಯಗಳಲ್ಲಿ ನೀರಿಲ್ಲ. ಕೃಷಿ ಬೆಳೆಗಳು ರೈತರ ಕೈಗೆ ಸಿಗದೇ ತತ್ತರಿಸಿ ಹೋಗಿವೆ. ಆಹಾರ ಪದಾರ್ಥಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ರೈತರು ಹೇಳಿದ್ದಾರೆ.
ಸರ್ಕಾರ ರೈತರ ಪಂಪ್ ಸೆಟ್ ಗೆ ಥ್ರಿ ಫೇಸ್ ವಿದ್ಯುತ್ ನೀಡದೆ ವಂಚನೆ ಮಾಡುತ್ತಿದೆ. ನಿರಂತರ ಲೋಡ್ ಶೆಡ್ಡಿಂಗ್ ಮಾಡುವುದರಿಂದ ದಿನಕ್ಕೆ 2 ಗಂಟೆಯೂ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಸುಮಾರು 40 ಲಕ್ಷ ಕೃಷಿ ಪಂಪ್ ಸೆಟ್ ಬಳಕೆದಾರರು ಇದ್ದಾರೆ. ಸರ್ಕಾರ ಕೈಗಾರಿಕೆಗಳಿಗೆ ಹಾಗೂ ಐಷಾರಾಮಿ ಬಳಕೆಗೆ ಮಾತ್ರ ವಿದ್ಯುತ್ ಒದಗಿಸುತ್ತಿದೆ. ಕೃಷಿಗೆ ವಿದ್ಯುತ್ ಒದಗಿಸದೆ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ರಾಜ್ಯ ಸರ್ಕಾರ ರೈತರಿಗೆ ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…