Chikkamagaluru: ಅರಣ್ಯಾಧಿಕಾರಿಗಳ ನಿಂದನೆ, ಕಿತ್ತಾಟ: ಆಡಿಯೋ ವೈರಲ್ ; ಸ್ಥಳೀಯರ ಆಕ್ರೋಶ
Team Udayavani, Aug 16, 2023, 1:05 PM IST
ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕರ್ತವ್ಯ ಮರೆತ ಅಧಿಕಾರಿಗಳಿಂದ ಪರಸ್ಪರ ನಿಂದನೆ, ಕಿತ್ತಾಟ ನಡೆದಿದ್ದು, ಇದಕ್ಕೆ ಸಂಬಂಧಿಸಿದ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.
ವಸತಿಗೃಹದ ಶೌಚಾಲಯದಲ್ಲಿನ ಪೈಪ್ ಒಡೆದು ಹೋಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಬ್ಬರು ಕಿತ್ತಾಡಿಕೊಂಡಿದ್ದು, ಇಬ್ಬರು ಅಧಿಕಾರಿಗಳ ವಿರುದ್ಧ ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ವಲಯ ಅರಣ್ಯಾಧಿಕಾರಿ ಮೋಹನ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ನವೀನ್ ಕಿತ್ತಾಟದ ಫೋನ್ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವಾಚ್ಯ ಶಬ್ದಗಳಿಂದ ಸಣ್ಣ ಮಕ್ಕಳಂತೆ ವರ್ತಿಸಿದ್ದಾರೆ ಎನ್ನಲಾಗಿದೆ.
ಅರಣ್ಯ ವಸತಿ ಗೃಹದಲ್ಲಿ ನಲ್ಲಿ ಪೈಪ್ ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ನಡುವೆ ಅವಾಚ್ಯ ಶಬ್ದಗಳಿಂದ ಪರಸ್ಪರ ಬೈಗುಳ, ಕಿತ್ತಾಟ ನಡೆದಿದ್ದು, ಇಬ್ಬರು ಮೂಡಿಗೆರೆ ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಡಿದು ಮಾತಾಡಬೇಡ ಎಂದ ನವೀನ್ ಗೆ ಮೋಹನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಸಣ್ಣ ವಿಚಾರ ವಿಕೋಪಕ್ಕೆ ತಿರುಗಿ ಬೈದಾಡಿಕೊಂಡಿರುವ ಅಧಿಕಾರಿಗಳಿಗೆ ಸಣ್ಣ ಮಕ್ಕಳಂತೆ ಅರಣ್ಯಾಧಿಕಾರಿಗಳು ಕಿತ್ತಾಡಿಕೊಂಡಿದ್ದಾರೆ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ