Chikkamagaluru: ಪೊಲೀಸರಿಂದ ಹಲ್ಲೆ ಪ್ರಕರಣ, ಕಾಫಿನಾಡಿನಲ್ಲಿ ವಕೀಲರಿಂದ ಬೃಹತ್ ಪ್ರತಿಭಟನೆ
Team Udayavani, Dec 1, 2023, 12:52 PM IST
ಚಿಕ್ಕಮಗಳೂರು: ಹೆಲ್ಮೆಟ್ ಧರಿಸದ ಕಾರಣಕ್ಕೆ ಪೊಲೀಸರು ವಕೀಲನಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿ ವಕೀಲರು ಪ್ರತಿಭಟನಾ ಮೆರವಣಿಗೆಗೆ ಮುಂದಾಗಿದ್ದಾರೆ.
ಹೆಲ್ಮೇಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಯುವ ವಕೀಲ ಪ್ರೀತಮ್ ಮೇಲೆ ಗುರುವಾರ ಪೊಲೀಸರು ಮನಸೋ ಇಚ್ಚೆ ಹಲ್ಲೆ ನಡೆಸಿದ್ದು ಇದರಿಂದ ಪ್ರೀತಮ್ ಎದೆ, ಬೆನ್ನು, ಕೈಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಘಟನೆಯನ್ನು ಖಂಡಿಸಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಯುತ್ತಿದ್ದು ಹಲ್ಲೆ ನಡೆಸಿದ ಪೊಲೀಸರನ್ನು ಬಂದಿಸುವವರೆಗೆ ಪ್ರತಿಭಟನೆಯನ್ನು ನಿಲ್ಲಸುವುದಿಲ್ಲ ಎಂದಿದ್ದಾರೆ. ಕೋರ್ಟಿನಿಂದ ಆಜಾದ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಪಿ ಕಚೇರಿಗೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ: Bengaluru; ಪೋಷಕರಿಗೆ ಶಾಲೆಗಳಲ್ಲಿ ಭದ್ರತೆಯ ಖಾತರಿ ನೀಡಬೇಕು: ಎಚ್ ಡಿ ಕುಮಾರಸ್ವಾಮಿ