ಲಾಕ್ಡೌನ್ಗೆ ಜನರ ಡೋಂಟ್ಕೇರ್
ಖುದ್ದು ವಾಹನ ತಪಾಸಣೆಗೆ ಮುಂದಾದ ಎಸ್ಪಿ ಹರೀಶ್ ಪಾಂಡೆನಕಲಿ ಕರ್ಫ್ಯೂ ಪಾಸ್ ಹಾವಳಿ
Team Udayavani, Apr 9, 2020, 1:05 PM IST
ಚಿಕ್ಕಮಗಳೂರು: ನಗರದ ಬೋಳರಾಮೇಶ್ವರ ದೇವಾಲಯ ಸಮೀಪದ ಚೆಕ್ ಪೋಸ್ಟ್ನಲ್ಲಿ ಎಸ್ಪಿ ಹರೀಶ್ ಪಾಂಡೆ ವಾಹನ ತಪಾಸಣೆ ನಡೆಸಿದರು.
ಚಿಕ್ಕಮಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಬರದಂತೆ ತಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಸಹ, ಜನರು ಮಾತ್ರ ಲಾಕ್ಡೌನ್ಗೆ ಡೋಂಟ್ಕೇರ್ ಎನ್ನದೇ ಸಂಚರಿಸುತ್ತಿರುವುದು ಆರಕ್ಷಕರಿಗೆ ತಲೆನೋವಾಗಿದೆ. ಅನಗತ್ಯವಾಗಿ ತಿರುಗಾಡುವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು, ಅವರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತಿದ್ದಾರೆ. ಕೆಲವರು ಲಾಕ್ ಡೌನ್ಗೂ ನಮ್ಮಗೂ ಸಂಬಂಧವೇ ಇಲ್ಲವೆಂಬಂತೆ ಕುಂಟು ನೆಪ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ವಾಹನ ಸಂಚಾರ ನಿಯಂತ್ರಿಲು ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರೇ ರಸ್ತೆಗಿಳಿದರು.
ಬೋಳರಾಮೇಶ್ವರ ದೇವಾಲಯ ಸಮೀಪದ ಚೆಕ್ಪೋಸ್ಟ್ಗೆ ಭೇಟಿ ನೀಡಿದ ಎಸ್ಪಿ ಹರೀಶ್ ಪಾಂಡೆ ತಾವೇ ವಾಹನಗಳನ್ನು ತಪಾಸಣೆಗೆ ಒಳಪಡಿಸಿದರು. ಕಾರಣವಿಲ್ಲದೇ ತಿರುಗಾಡುವರ ವಾಹನ ಜಪ್ತಿ ಮಾಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ನಕಲಿ ಕರ್ಫ್ಯೂ ಪಾಸ್ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ಫ್ಯೂ ಪಾಸ್ ಹೊಂದಿರುವವರ ಪಾಸ್ಗಳನ್ನು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದರು. ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಕಟ್ಟುನಿಟ್ಟಾಗಿ ವಾಹನ ತಪಾಸಣೆ ನಡೆಸಲಾಗುತ್ತಿದ್ದು, ಅನಗತ್ಯವಾಗಿ ತಿರುಗಾಡುವರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.
ಜನರು ಬೇಕಾಬಿಟ್ಟಿ ತಿರುಗಾಡುತ್ತಿದ್ದು, ಸರ್ಕಾರದ ಆದೇಶಕ್ಕೂ ನಮ್ಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಹಾಗಾಗಿ, ಪೊಲೀಸರು ಹೈರಾಣಾಗಿ ಹೋಗಿದ್ದು, ಜನಸಂಚಾರವನ್ನು ನಿಯಂತ್ರಿಸಲು ಇನ್ನೂ ಕಟ್ಟುನಿಟ್ಟಿನ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಬುಧವಾರ ಬೆಳಿಗ್ಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ರೈತರು ಮತ್ತು ವ್ಯಾಪಾರಸ್ಥರು ಏಕಕಾಲದಲ್ಲಿ ಲಗ್ಗೆ ಇಟ್ಟ ಹಿನ್ನೆಲೆಯಲ್ಲಿ ಇಡೀ ಕೃಷಿ ಉತ್ಪನ್ನ ಮಾರುಕಟ್ಟೆಯೇ ಜನಜಂಗುಳಿಯಿಂದ ತುಂಬಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟಿಗೆ ಮುಗಿಬಿದ್ದರು.
ಜನರನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹಾರ ನಡೆಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಜಿಲ್ಲಾಡಳಿತ ಎಷ್ಟೇ ಮನವಿ ಮಾಡಿಕೊಂಡರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಮಾರ್ಪಟಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಜನರು ಡೋಟ್ ಕೇರ್ ಎನ್ನುತ್ತಿರುವುದು ವಿಪರ್ಯಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ