ಲಾಕ್ಡೌನ್ ಸಡಿಲ; ಹೆಚ್ಚಿದ ಸಂಚಾರ
Team Udayavani, Apr 24, 2020, 12:28 PM IST
ಚಿಕ್ಕಮಗಳೂರು: ನಗರದ ಎಂ.ಜಿ ರಸ್ತೆಯಲ್ಲಿ ವಾಹನ ಸಂಚಾರದ ದೃಶ್ಯ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆ ಹಸಿರು ವಲಯದಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಲಾಕ್ಡೌನ್ ನಲ್ಲಿ ಸ್ವಲ್ಪಮಟ್ಟಿಗೆ ಸಡಿಲಿಕೆ ಮಾಡಲಾಗಿದೆ. ಲಾಕ್ಡೌನ್ ಸ್ಪಲ್ಪಮಟ್ಟಿಗೆ ಸಡಿಲಿಕೆಯಾದ ಕಾರಣ ಲಾಕ್ಡೌನ್ ಆರಂಭಗೊಂಡ ದಿನಗಳಿಗಿಂತ ಗುರುವಾರ ನಗರದಲ್ಲಿ ವಾಹನ ಸಂಚಾರ ಹಾಗೂ ಜನಸಂಚಾರ ಹೆಚ್ಚಳವಾಗಿತ್ತು. ಜಿಲ್ಲೆಯ ಗಡಿ ಪ್ರದೇಶದಲ್ಲಿ ಬೇರೆ ಜಿಲ್ಲೆಯ ವಾಹನಗಳು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಮುಂದುವರಿಸಲಾಗಿದೆ.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ಗಳಲ್ಲಿ ಅನುಸರಿಸುತ್ತಿದ್ದ ಕಟ್ಟುನಿಟ್ಟಿನ ಕ್ರಮಗಳನ್ನು ಸ್ವಲ್ಪಮಟ್ಟಿಗೆ ಸಡಿಲಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಗತ್ಯ ವಸ್ತುಗಳ ಮಳಿಗೆ, ಪೆಟ್ರೋಲ್ ಬಂಕ್, ಬ್ಯಾಂಕ್, ಖಾಸಗಿ ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಲಾಕ್ಡೌನ್ ಸಡಿಲಗೊಳಿಸಿ ಕೆಲ ಕೈಗಾರಿಕೆ ಆರಂಭಿಸಲು ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಕೆಲಸದಲ್ಲಿ ತೊಡಗಿಕೊಳ್ಳುವಂತೆ ಕೈಗಾರಿಕೆಗಳಿಗೆ ಸೂಚಿಸಲಾಗಿದೆ. ಬಾಗಿಲು ಹಾಕಿದ್ದ ಅನೇಕ ಕೈಗಾರಿಕೆಗಳು ಕೆಲಸ ಪುನಃ ಪ್ರಾರಂಭಿಸಿವೆ. ಜಿಲ್ಲೆಯಲ್ಲಿ 3 ದೊಡ್ಡ ಕೈಗಾರಿಕೆ, 6 ಮಧ್ಯಮ ವರ್ಗದ ಕೈಗಾರಿಕೆ ಹಾಗೂ 5,552 ಸಣ್ಣಕೈಗಾರಿಕೆಗಳಿವೆ. ಸುಮಾರು 21 ಸಾವಿರಕ್ಕೂ ಹೆಚ್ಚಿನ ಜನರು ಈ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ.
ಸರ್ಕಾರದ ಆದೇಶದಂತೆ ಈಗಾಗಲೇ ಕಾಫಿ ಕ್ಯೂರಿಂಗ್, ಟೀ ಉದ್ಯಮ, ಅಕ್ಕಿ ಗಿರಣಿ, ಬೇಕರಿ, ಹಿಟ್ಟಿನ ಗಿರಣಿ, ಆಹಾರ ಉತ್ಪಾದನಾ ಘಟಕಗಳು ಕಾರ್ಯ ಪ್ರಾರಂಭಿಸಿವೆ. ಗುರುವಾರ ಸರ್ಕಾರ ಲಾಕ್ಡೌನ್ ಸಡಲಿಸಿ ಆದೇಶ ನೀಡಿದ ಬಳಿಕ ಜಿಲ್ಲೆಯಲ್ಲಿರುವ 32 ಸ್ಟೋನ್ ಕ್ರಷರ್ಗಳನ್ನು ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಕೃಷಿ ಚಟುವಟಿಕೆಗೆ ಲಾಕ್ ಡೌನ್ನ ಯಾವುದೇ ನಿರ್ಬಂಧ ವಿಧಿಸದೇ, ಮುಕ್ತ ಅವಕಾಶ ನೀಡಿದೆ. ಜಿಲ್ಲೆಯಲ್ಲಿ ಸಕಾಲಕ್ಕೆ ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಗರ ಪ್ರದೇಶದ ಕಡೆ ಮುಖಮಾಡದೆ ಇದ್ದ ಗ್ರಾಮೀಣ ಪ್ರದೇಶದ ಜನರು ಬೈಕು, ಕಾರುಗಳಲ್ಲಿ ನಗರ ಪ್ರದೇಶಗಳತ್ತ ಮುಖ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ