ಗುಂಪಿನಿಂದ ಬೇರ್ಪಟ್ಟ ಮರಿ ಆನೆ; ತಾಯಿಯನ್ನು ಕಾಣದೆ, ದಿಕ್ಕುತೋಚದೆ ಕಾಫಿತೋಟದೆಲ್ಲೆಡೆ ಓಡಾಟ
Team Udayavani, Jul 31, 2023, 12:43 PM IST
ಚಿಕ್ಕಮಗಳೂರು : ತಾಯಿಯನ್ನು ಕಳೆದುಕೊಂಡು ಕಾಡಾನೆ ಮರಿಯೊಂದು ಅನಾಥವಾಗಿರುವ ಘಟನೆ ಮೂಡಿಗೆರೆ-ಬೇಲೂರು ರಸ್ತೆಯ ಚೀಕನಹಳ್ಳಿ ಬಳಿ ನಡೆದಿದೆ.
ಈ ಮರಿ ಆನೆಯೂ ಪುಟ್ಟ ಪುಟ್ಟ ಹೆಜ್ಜೆ ಇಟ್ಟುಕೊಂಡು ಅಮ್ಮನಿಗಾಗಿ ಪರಿತಪಿಸುತ್ತಿದ್ದು, ಬಾ ಅಂದರೆ ಹತ್ತಿರ ಬರುತ್ತದೆ, ಹೋಗು ಎಂದರೆ ದೂರ ಹೋಗುತ್ತದೆ. ಹೇಳಿದ ಮಾತನ್ನು ಮಕ್ಕಳಂತೆ ಕೇಳುವ ಆನೆ ಇದಾಗಿದೆ.
ಆನೆ ಮರಿ ದಿಕ್ಕುತೋಚದೆ ಕಾಫಿತೋಟದಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದು, ಅರಣ್ಯ ಅಧಿಕಾರಿಗಳು ಮರಿ ಆನೆಗೆ ನೀರು ಕೊಟ್ಟು ಸಂತೈಸಿದದರು. ಮರಿ ಆನೆಯನ್ನ ಅಮ್ಮ ಬಳಿ ಸೇರಿಸಲು ಅರಣ್ಯ ಅಧಿಕಾರಿಗಳು ಪರದಾಡುತ್ತಿದ್ದಾರೆ.
ಗುಂಪಿನಿಂದ ಬೇರ್ಪಟ್ಟ ಮರಿಯನ್ನು ಆನೆಗಳ ಗುಂಪು ಹತ್ತಿರ ಸೇರಿಸುವುದಿಲ್ಲ. ಆನೆಗಳ ಗುಂಪು ಮರಿಯನ್ನು ಬಿಟ್ಟು ಎಲ್ಲಿಗೆ ಹೋಗಿವೆ ಎಂದು ಯಾರಿಗೂ ಗೊತ್ತಿಲ್ಲ. ಹೇಗಾದರೂ ಪ್ರಯತ್ನಪಟ್ಟು ಮರಿಯನ್ನು ಅಮ್ಮನ ಬಳಿ ಸೇರಿಸಲು ಅರಣ್ಯಾಧಿಕಾರಿಗಳು ಮರಿ ಆನೆಯನ್ನು ಕೊಂಡೊಯ್ದರು.
ಮೂಡಿಗೆರೆ-ಸಕಲೇಶಪುರ ಗಡಿಯಲ್ಲಿ ಬೀಡುಬಿಟ್ಟಿರೋ ಕಾಡಾನೆಗಳ ತಂಡದಿಂದ ತಪ್ಪಿಸಿಕೊಂಡ ಮರಿ ಇರಬಹುದು ಎಂದು ಅಧಿಕಾರಿಗಳಿಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ