ಅತಿವೃಷ್ಟಿ ಹಾನಿ ಕಾಮಗಾರಿ ತ್ವರಿತಕ್ಕೆ ಸಚಿವ ರವಿ ಸೂಚನೆ
Team Udayavani, Apr 24, 2020, 1:48 PM IST
ಚಿಕ್ಕಮಗಳೂರು: 2019ರಲ್ಲಿ ಮಳೆಯಿಂದಾದ ಅತಿವೃಷ್ಟಿ ನಿವಾರಣೆ ಮಾಡುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ಸಿ.ಟಿ. ರವಿ ಸಭೆ ನಡೆಸಿದರು.
ಚಿಕ್ಕಮಗಳೂರು: ಕಳೆದ ಆಗಸ್ಟ್ ಸೆಪ್ಪೆಂಬರ್ ತಿಂಗಳಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಕಟ್ಟಡ, ಮನೆ, ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಮುಂಗಾರು ಆರಂಭಗೊಳ್ಳುವುದರೊಳಗೆ ಪೂರ್ಣಗೊಳಿಸುವಂತೆ ಸಚಿವ ಸಿ.ಟಿ. ರವಿ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2019ರ ಆಗಸ್ಟ್- ಸೆಪ್ಪೆಂಬರ್ ತಿಂಗಳಲ್ಲಿ ಮಳೆಯಿಂದಾದ ಅತಿವೃಷ್ಟಿ ನಿವಾರಣೆ ಮಾಡುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಮನೆ, ಶಾಲಾ ಕಟ್ಟಡ, ಸೇತುವೆ, ರಸ್ತೆಗಳು ಸೇರಿದಂತೆ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಗೊಳಗಾಗಿದ್ದವು. ಅವುಗಳ ಪುನರ್ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ಸಾಕಷ್ಟು ಹಣ ಬಿಡುಗಡೆಯಾಗಿದ್ದರೂ ಕಾಮಗಾರಿಗಳು ಸಂಪೂರ್ಣವಾಗಿಲ್ಲ.
ಈ ಬಗ್ಗೆ ಕ್ರಮ ವಹಿಸಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಎ,ಬಿ ಹಾಗೂ ಸಿ
ಕೆಟಗರಿಯ ಮನೆಗಳಲ್ಲಿ ಒಟ್ಟು 2612 ಮನೆಗಳಿದ್ದು, 1,616 ಮನೆಗಳು ಪೂರ್ಣವಾಗಿದ್ದು, 584 ಮನೆಗಳ ಕಾಮಗಾರಿ ನಡೆಯುತ್ತಿದೆ. 430 ಮನೆಗಳ ಯಾವುದೇ ಕಾಮಗಾರಿ ಇನ್ನು ಆರಂಭವಾಗಿಲ್ಲ ನಡೆಯದೆ ಬಾಕಿ ಉಳಿದಿದೆ. ಹಣ ಬಿಡುಗಡೆಯಾಗಿದ್ದರೂ ಕಾಮಗಾರಿ ಆರಂಭಿಸದ ಫಲಾನುಭವಿಗಳಿಗೆ ಅನುದಾನ ವಾಪಸ್ ಪಡೆಯುವುದಾಗಿ ನೋಟಿಸ್ ಅಥವಾ ತಿಳುವಳಿಕೆ ಪತ್ರ ನೀಡುವಂತೆ ತಿಳಿಸಿದರು.
ಮನೆ ನಿರ್ಮಾಣಕ್ಕಾಗಿ ಅಂಗಡಿ, ಮಾವಿನಕೆರೆ, ಬಿ.ಹೊಸಹಳ್ಳಿ ಭಾಗದಲ್ಲಿ ಒಟ್ಟು 16 ಎಕರೆ ನಿವೇಶನ ಜಾಗ ಗುರುತಿಸಲಾಗಿದ್ದು, ಕೆಲವರಿಗೆ ಹಕ್ಕುಪತ್ರ ವಿತರಿಸಲಾಗಿದೆ. ಇನ್ನು ಕೆಲವರು ಹಕ್ಕುಪತ್ರ ಪಡೆಯಲು ನಿರಾಕರಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ
ಗೌತಮ್ ಸಭೆಗೆ ತಿಳಿಸಿದರು. ಕೋವಿಡ್ ಗೆ ಸಂಬಂಧಿಸಿದಂತೆ ಜಿಲ್ಲೆಯ ಸುರಕ್ಷತೆಗಾಗಿ ಅವಶ್ಯಕವಿರುವ 3,500 ಪಿ.ಪಿ.ಇ ಕಿಟ್ಗಳನ್ನು
ಹೊಂದಲಾಗಿದ್ದು, ಅಗತ್ಯ ಪ್ರಮಾಣದ ಮಾಸ್ಕ್ಗಳನ್ನು ಹೊಂದಲಾಗಿದೆ. ಜೊತೆಗೆ ಇನ್ನೂ 5 ಸಾವಿರ ಮಾಸ್ಕ್ಗಳಿಗೆ ಬೇಡಿಕೆ ಇಡಲಾಗಿದೆ. ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳ ಕೆಲಸ ಆರಂಭಿಸಲು ಯಾವುದೇ ಅಡೆ ತಡೆಗಳಿಲ್ಲ. ಆದಷ್ಟು ಶೀಘ್ರ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಸುವಂತೆ ತಿಳಿಸಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಅಪರ ಜಿಲ್ಲಾಧಿಕಾರಿ ಡಾ| ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ