ಶಂಕರಪುರ ರಸ್ತೆ ಚರಂಡಿ ಅವೈಜ್ಞಾನಿಕ ನಿರ್ಮಾಣಕ್ಕೆ ವಿರೋಧ

ಅಧಿಕಾರಿಗಳು-ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ

Team Udayavani, Feb 17, 2020, 3:11 PM IST

17-February-18

ಚಿಕ್ಕಮಗಳೂರು: ದೀಪಾ ನರ್ಸಿಂಗ್‌ ಹೋಮ್‌ ಸಮೀಪದ ಶಂಕರಪುರ ರಸ್ತೆ ಚರಂಡಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಜನ ಸೇನೆಯ ಜಿಲ್ಲಾಧ್ಯಕ್ಷ ಅನಿಲ್‌ ಆನಂದ್‌ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅವರಿಗೆ ಮನವಿ ಸಲ್ಲಿಸಿದರು.

ದೀಪಾ ನರ್ಸಿಂಗ್‌ ಹೋಂ ಮುಖ್ಯರಸ್ತೆ ಹಾಗೂ ಚರಂಡಿಯನ್ನು ನಗರಸಭೆ ದುರಸ್ತಿ ಮಾಡುತ್ತಿದೆ. ಆದರೆ, ಗುತ್ತಿಗೆದಾರ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದು, ಶಂಕರಪುರ 4ನೇ ಹಾಗೂ 5ನೇ ತಿರುವುಗಳಲ್ಲಿ ನೀರು ಒಳ ರಸ್ತೆಗಳಲ್ಲಿ ನುಗ್ಗುವ ರೀತಿ ಚರಂಡಿ ನಿರ್ಮಾಣ ಮಾಡಲಾಗಿದೆ ಎಂದು ದೂರಿದರು.

ಚರಂಡಿ ನಿರ್ಮಾಣಕ್ಕೆ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್‌ ತುಂಡಾಗಿ ಬಡಾವಣೆಯ ಜನರು ಕುಡಿಯುವ ನೀರಿನ ಬವಣೆ ಅನುಭವಿಸುತ್ತಿದ್ದಾರೆ. ಮನೆಗಳಿಗೆ ಸರಬರಾಜಾಗುತ್ತಿರುವ ನೀರು ಕಲುಷಿತಗೊಂಡು ಬಡಾವಣೆಯ ಜನರಲ್ಲಿ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. 6
ತಿಂಗಳಿಂದ ಅಮೃತ್‌ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಈ ಬಡಾವಣೆಯ ನಾಗರಿಕರು ನೀರು ಮತ್ತು ರಸ್ತೆಯ ಸೌಕರ್ಯವಿಲ್ಲದೇ ಜೀವನ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಚರಂಡಿ, ರಸ್ತೆ ಹಾಗೂ ಇಲ್ಲಿನ ಕಲುಷಿತ ವಾತಾವರಣದಿಂದ ಉಸಿರುಗಟ್ಟುವ ಸ್ಥಿತಿ ನಿರ್ಮಾಣವಾಗಿದ್ದು ಗುತ್ತಿಗೆದಾರರು, ಅಧಿಕಾರಿಗಳು, ಜನಪ್ರತಿನಿಧಿಗಳ  ಜವಾಬ್ದಾರಿತನದಿಂದ ಒಂದು ತಿಂಗಳು ಕಳೆದರು ತಿಂಗಳಾದರು ಚರಂಡಿಯ ಒಂದು ಬದಿಯ ಸ್ಲ್ಯಾಬ್‌ ನಿರ್ಮಿಸಲು
ಸಾಧ್ಯವಾಗಿಲ್ಲ. ಈ ರಸ್ತೆಯಲ್ಲಿ ವೃದ್ಧರು, ವಿಕಲಚೇತನರು, ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಗೆ ಸಾಗುವ ಆ್ಯಂಬುಲೆನ್ಸ್‌ಗಳು ಈ ಮಾರ್ಗವನ್ನು ಓಡಾಡುವರಾಗಿದ್ದು, ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿರುವುದರಿಂದ ಬಡಾವಣೆಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು.

ಅಮೃತ್‌ ಯೋಜನೆಗಾಗಿ ರಸ್ತೆ ಗುಂಡಿ ಅಗೆದ ಗುತ್ತಿಗೆದಾರರು ಅದನ್ನು ಪುನರ್‌ ನಿರ್ಮಿಸದೇ ಸಾರ್ವಜನಿಕ ಓಡಾಟಕ್ಕೂ ತೊಂದರೆಯಾಗಿದೆ. ಶಂಕರಪುರದ ಬಡಾವಣೆಯ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

ಮನವಿ ಪತ್ರ ನೀಡಿ ನಗರಸಭೆ ಎ.ಇ.ಇ ಗವಿರಂಗಪ್ಪರವರೊಂದಿಗೆ ಸ್ಥಳ ಪರಶೀಲನೆ ನಡೆಸಲಾಯಿತು. ಇನ್ನು ಒಂದು ತಿಂಗಳ ಒಳಗಾಗಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ದಲಿತ ಜನ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ, ಜಿಲ್ಲಾ ಮಹಿಳಾ ಅಧ್ಯಕ್ಷೆ ಸ್ವರ್ಣಗೌರಿ, ಶ್ರೀರಾಮ್‌ ಸೇನೆ ಜಿಲ್ಲಾಧ್ಯಕ್ಷರಾದ ರಂಜಿತ್‌ ಶೆಟ್ಟಿ, ಸ್ವಸ್ಥಭೂಮಿ ಪ್ರತಿಷ್ಠಾನ ಗೌರವ ಅಧ್ಯಕ್ಷ ಗುರುಮೂರ್ತಿ, ಸವಿತಾ ಸಮಾಜ ಮೀಸಲಾತಿ ಒಕ್ಕೂಟದ ತಾಲೂಕು ಅಧ್ಯಕ್ಷ ಜೆ. ಸತ್ಯನಾರಾಯಣ, ಶಂಕರಪುರ ಲಕ್ಷ್ಮೀಶ ನಗರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಆನಂದ್‌ ಮೂರ್ತಿ, ತಿಲಕ್‌ ದತ್‌, ಮಂಜುನಾಥ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.