ಗನ್ ತೋರಿಸಿದ ಪಿಎಸ್ಐಗೆ ಗ್ರಾಮಸ್ಥರಿಂದ ಥಳಿತ, ಏನಿದು ವಿವಾದ?
Team Udayavani, Feb 28, 2017, 12:21 PM IST
ಚಿಕ್ಕಮಗಳೂರು: ಮುಂದುಗಡೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಗೂಂಡಾಗಿರಿ ಪ್ರದರ್ಶಿಸಿದ ಪಿಎಸ್ಐಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಿಕ್ಕಮಗಳೂರಿನ ಸಿರಗುಂದ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಚಿಕ್ಕಮಗಳೂರಿನ ಸಿರಗುಂದ ಗ್ರಾಮದ ಬಳಿ ಕಾರೊಂದು ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಗ ಡಿಕ್ಕಿ ಹೊಡೆದುದನ್ನು ಪ್ರಶ್ನಿಸಿದಾಗ, ಹಿಂಬದಿ ಕಾರಿನಲ್ಲಿದ್ದ ಪಿಎಸ್ಐ ಪಿಸ್ತೂಲ್ ಹೊರಗೆ ತೆಗೆದು, ಏಯ್ ಮಗನೇ ಮೂಳೆ ಮುರಿದು ಕೈಗೆ ಕೊಡ್ತೀನಿ ಎಂದು ಆವಾಜ್ ಹಾಕಿದ್ದ ಪ್ರಸಂಗ ನಡೆಯಿತು.
ಆಗ ಗ್ರಾಮಸ್ಥರು ಒಟ್ಟಾಗಿ ಮಫ್ತಿಯಲ್ಲಿದ್ದ ಪಿಎಸ್ಐ ಗವಿರಾಜು ಹಾಗೂ ಇನ್ನಿಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು, ಈ ಸಂದರ್ಭದಲ್ಲಿ ವಾಗ್ವಾದ ನಡೆದಾಗ ಗ್ರಾಮಸ್ಥರು ಮೂವರು ಪೊಲೀಸರನ್ನು ಥಳಿಸಿ ಕೂಡಿ ಹಾಕಿದ್ದರು.
ಗಲಾಟೆ ವಿಕೋಪಕ್ಕೆ ಹೋದಾಗ ಸ್ಥಳಕ್ಕೆ ಪೊಲೀಸರ ಪಡೆ ಆಗಮಿಸಿತ್ತು. ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಕೂಡಾ ಸ್ಥಳಕ್ಕೆ ಬಂದಾಗ ಪುಂಡಾಟಿಕೆ ನಡೆಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡರು. ಪಿಎಸ್ಐ ಜೊತೆ ಹೇಗೆ ನಡೆದುಕೊಳ್ಳಬೇಕು ಅಂತ ಗೊತ್ತಿಲ್ವೇನ್ರೋ…ಹಲ್ಲು ಮುರಿದು ಕೈಗೆ ಕೊಡ್ತೀನಿ ಎಂದು ಆವಾಜ್ ಹಾಕಿದ್ದರು. ಪ್ರಕರಣದ ಸಂಬಂಧ 6 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಕೇಸ್ ಹಾಕಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ