ಅಲ್ಪ ಸಂಖ್ಯಾತರಿಗೆ ಸೌಲಭ್ಯ ಕಲ್ಪಿಸಿ
15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ಡಾ| ಬಗಾದಿ ಗೌತಮ್ ಸೂಚನೆ
Team Udayavani, Jan 10, 2020, 5:34 PM IST
ಚಿಕ್ಕಮಗಳೂರು: ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರ ಮೀಸಲಿರಿಸಿರುವ ಅನುದಾನವನ್ನು ಅದೇ ಸಮುದಾಯದ ಅರ್ಹ ಫಲಾನುಭವಿಗಳಿಗೆ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅಡಿ ಜಿಲ್ಲೆಯಲ್ಲಿ ಒಟ್ಟು 8466 ಅರ್ಜಿ ಸಲ್ಲಿಕೆಯಾಗಿದ್ದು, 3397 ಫಲಾನುಭವಿಗಳನ್ನು ಆಯ್ಕೆ ಮಾಡಿ ಸೌಲಭ್ಯವನ್ನು ಒದಗಿಸಲಾಗಿದೆ. ಉಳಿದ ಫಲಾನುಭವಿಗಳನ್ನು 2ನೇ ಹಂತದಲ್ಲಿ ಆಯ್ಕೆ ಮಾಡಿ ಜನವರಿ ಅಂತ್ಯದೊಳಗೆ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಸಾಮಾಜಿಕ ಚಲನಶೀಲತೆ ಮತ್ತು ಸಾಂಸ್ಥಿಕ ಅಭಿವೃದ್ಧಿ ಕಾರ್ಯಕ್ರಮದಡಿ 32 ಸಂಘಗಳು ರಚನೆಯಾಗಿದ್ದು, ಸರ್ಕಾರದಿಂದ ಹಣ ಬಿಡುಗಡೆಯಾಗದ ಕಾರಣ ಪ್ರಗತಿಯಲ್ಲಿ ಕುಂಠಿತವಾಗಿದೆ. ಜನವರಿ 15 ರೊಳಗಾಗಿ ಲೀಡ್ ಬ್ಯಾಂಕ್ ಸಹಕಾರದೊಂದಿಗೆ ಸ್ವ-ಸಹಾಯ ಸಂಘ ಸಂಸ್ಥೆಗಳು ಪ್ರಗತಿಯಾಗಬೇಕು ಹಾಗೂ ಪಿ.ಎಂ.ಇ.ಜಿ.ಪಿ. ಮತ್ತು ಸಿ.ಎಂ.ಇ.ಜಿ.ಪಿ. ಕಾರ್ಯಕ್ರಮಗಳು ಪ್ರಗತಿಯಾಗಬೇಕು ಎಂದು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಧಿಕಾರಿಗೆ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಪ್ರಗತಿ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ಜನರಿಗೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ವತಿಯಿಂದ ಶಿಬಿರಗಳನ್ನು ಏರ್ಪಡಿಸಿ ಸ್ವಚ್ಛತೆಯ ಜಾಗೃತಿ ಹಾಗೂ ಲಸಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹೇಳಿದರು.
ಬಿಸಿಯೂಟ ಯೋಜನೆ, ಕ್ಷೀರ ಭಾಗ್ಯ, ಸೈಕಲ್ ಹಾಗೂ ಪಠ್ಯ ಪುಸ್ತಕಗಳ ವಿತರಣೆ ಶೇ.100 ಪ್ರಗತಿ ಸಾಧಿಸಿದೆ. ರಾಮನಹಳ್ಳಿ ಉರ್ದು ಶಾಲೆಗೆ ಮಂಜೂರಾಗಿದ್ದ ಹೆಚ್ಚುವರಿ ಕೊಠಡಿಯನ್ನು ಬಣಕಲ್ ಶಾಲೆಯಲ್ಲಿ 146 ಮಕ್ಕಳು ವ್ಯಾಸಂಗ ಮಾಡುತ್ತಿರುವ ಕಾರಣ ಅಲ್ಲಿಗೆ ಸ್ಥಳಾತರಿಸುವಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ವಾಜಪೇಯಿ ವಸತಿ ಯೋಜನೆಯಡಿ 73 ಅಲ್ಪಸಂಖ್ಯಾತ ಫಲಾನುಭವಿಗಳಲ್ಲಿ ಕಡೂರು 8, ಚಿಕ್ಕಮಗಳೂರು 15 ಎನ್.ಆರ್.ಪುರ 2, ಬೀರೂರು 5, ಮೂಡಿಗೆರೆ 2, ತರೀಕೆರೆ 8
ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆನ್ಲೈನ್ ಅರ್ಜಿ ಸಲ್ಲಿಕೆಯ ತಾಂತ್ರಿಕ ದೋಷದಿಂದ ಉಳಿದ ಫಲಾನುಭವಿಗಳ ಆಯ್ಕೆಯಲ್ಲಿ ವಿಳಂಬವಾಗಿದ್ದು, ಶೀಘ್ರವಾಗಿ ಆಯ್ಕೆ ಪ್ರಕ್ರಿಯೆಯಾಗಬೇಕು ಎಂದು ಹೇಳಿದರು.
ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರೂಪಿತವಾಗಿರುವ ಶಾದಿ ಮಹಲ್, ಚರ್ಚ್ ಗಳ ಕಾಮಗಾರಿಗೆ ಮೀಸಲಿರಿಸಿರುವ ಅನುದಾನವನ್ನು ಶೀಘ್ರವಾಗಿ ಬಿಡುಗಡೆಗೊಳಿಸಿ ಕಾಮಗಾರಿಯನ್ನು
ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ನಾಮ ನಿರ್ದೇಶನ ಸದಸ್ಯ ಜೇಮ್ಸ್ ಡಿಸೋಜ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದುಮಣಿ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ