![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ
Team Udayavani, May 8, 2024, 1:25 PM IST
![ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ](https://www.udayavani.com/wp-content/uploads/2024/05/Chickka-620x335.jpg)
ಉದಯವಾಣಿ ಸಮಾಚಾರ
ಚಿಕ್ಕಮಗಳೂರು: ಬಿಸಿಲ ಝಳದಿಂದ ರೋಸಿ ಹೋಗಿದ್ದ ಕಾಫಿನಾಡಿನ ಜನರಿಗೆ ಮಳೆ ತಂಪೆರೆದಿದೆ. ಕಾಫಿನಾಡಿನ ಅಲ್ಲಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಹಾಗೂ ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಹಸಿರು ಹಾಸಿಗೆ ಹೊಂದಿರುವ ಕಾಫಿನಾಡು ಬೇಸಿಗೆಯಲ್ಲಿ ಎಷ್ಟೇ ಬಿಸಿಲಿದ್ದರೂ ಜಿಲ್ಲಾದ್ಯಂತ ಉಷ್ಣಾಂಶದ ಪ್ರಮಾಣ 30 ಡಿಗ್ರಿಗಿಂತ ಹೆಚ್ಚು ಇರುತ್ತಿರಲಿಲ್ಲ. ಆದರೆ ಈ ಬಾರಿ ಏಪ್ರಿಲ್ ತಿಂಗಳಲ್ಲಿ ತಾಪಮಾನದ ಪ್ರಮಾಣ 40 ಡಿಗ್ರಿ ಮೀರಿತ್ತು. ಪರಿಣಾಮ ಬಿಸಿಲ ಧಗೆಯಿಂದ ಜನರು ನಲುಗಿ ಹೋಗಿದ್ದರು. ಬಿಸಿಲ ತಾಪದಿಂದಾಗಿ ಶಾಲಾ ಮಕ್ಕಳು ಕೂಡ ರಜೆಯ ಸವಿ ಅನುಭವಿಸಲೂ ಸಾಧ್ಯವಾಗಿರಲಿಲ್ಲ.
ಬಿರು ಬಿಸಿಲ ಕಾರಣಕ್ಕೆ ಮಕ್ಕಳು ಜ್ವರ, ಆಯಾಸದಂತಹ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುವಂತಾಗಿತ್ತು. ಬಯಲು ಭಾಗ ಹಾಗೂ ಮಲೆನಾಡು ಭಾಗದ ಕೃಷಿಕರು ತಮ್ಮ ಹೊಲಗದ್ದೆಗಳಲ್ಲಿ ಬೆಳೆದ ಬೆಳೆ ಸಂರಕ್ಷಣೆಗೆ ಹರಸಾಹಸಪಡುವಂತಾಗಿತ್ತು. ಮಲೆನಾಡು ಭಾಗದಲ್ಲಿ ಕಾಫಿ, ಅಡಕೆ ತೋಟಗಳಿಗೆ ನೀರು ಹಾಯಿಸಲೂ ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲಾದ್ಯಂತ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿತ್ತು.
ಕಳೆದ ಮೂರು ದಿನಗಳಿಂದ ಜಿಲ್ಲಾದ್ಯಂತ ಸಂಜೆ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತಾದರೂ ಮಳೆಯ ಸಿಂಚನವಾಗದ ಪರಿಣಾಮ ಸಾರ್ವಜನಿಕರು, ರೈತರಲ್ಲಿ ನಿರಾಶೆ ಮನೆ ಮಾಡಿತ್ತು. ಆದರೆ ಮಂಗಳವಾರ ಮಧ್ಯಾಹ್ನ ಜಿಲ್ಲೆಯ
ಅಲ್ಲಲ್ಲಿ ಮಳೆಯ ಹನಿಗಳು ಉದುರಲಾರಂಭಿಸಿದ್ದು, ನೋಡ ನೋಡುತ್ತಿದ್ದಂತೆ ಗುಡುಗು, ಸಿಡಿಲು, ಗಾಳಿಯೊಂದಿಗೆ ಸುಮಾರು 2 ಗಂಟೆಗಳ ಮಳೆ ಭೋರ್ಗರೆಯಿತು.
ಮಂಗಳವಾರ ಮಧ್ಯಾಹ್ನ 2ಕ್ಕೆ ಚಿಕ್ಕಮಗಳೂರು ನಗರ ಹಾಗೂ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಆಲಿಕಲ್ಲುಗಳೊಂದಿಗೆ ಭೋರ್ಗರೆದ ಮಳೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಜನಜೀವನ ಅಸ್ತವ್ಯಸ್ತಗೊಳಿಸಿತು. ರಸ್ತೆಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ವಾಹನಗಳ ಸಂಚಾರವೂ ಸ್ತಬ್ಧಗೊಂಡಿತ್ತು. ಮಳೆಯ ಆರ್ಭಟದೊಂದಿಗೆ ಭಾರೀ ಗಾಳಿ ಹಾಗೂ
ಸಿಡಿಲಿನ ಹೊಡೆತಕ್ಕೆ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಸಾರ್ವಜನಿಕರು, ಜಾನುವಾರುಗಳ ಪ್ರಾಣಕ್ಕೆ ಹಾನಿಯಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳ ವ್ಯಾಪ್ತಿಯ ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದರೆ, ಬಯಲು ಭಾಗದ ಕಡೂರು, ತರೀಕೆರೆ ತಾಲೂಕುಗಳ ವ್ಯಾಪ್ತಿಯ ಅಲ್ಲಲ್ಲಿ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ. ಮಂಗಳವಾರ ಸುರಿದ ಮಳೆಯಿಂದಾಗಿ ಸದ್ಯ ಕಾಫಿನಾಡಿನಾದ್ಯಂತ ವಾತಾವರಣವೇ ಬದಲಾಗಿದ್ದು, ಎಲ್ಲೆಡೆ ತಂಪಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಕೆಲ ದಿನಗಳವರೆಗೆ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರು, ಕಾಫಿ, ಅಡಕೆ ಬೆಳೆಗಾರರು ಕೃಷಿ ಚಟುವಟಿಕೆಗೆ ಸಿದ್ಧತೆಗೆ ಮುಂದಾಗಿದ್ದಾರೆ. ಒಟ್ಟಾರೆ ಬಿಸಿಲಿನಿಂದ ರೋಸಿ ಹೋಗಿದ್ದ ಕಾಫಿನಾಡಿನ ಜನ ಸದ್ಯ ಸುರಿದ ಮಳೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.