ರಾಮೇಶ್ವರನಿಗೆ ನಿತ್ಯ ದುರ್ನಾತದ ಮಜ್ಜನ

ದೇವಸ್ಥಾನ ಪಕ್ಕದ ಯಗಚಿಹಳ್ಳದಲ್ಲಿ ಕೊಳಚೆ ನೀರು : ಮೂಗು ಮುಚ್ಚಿಕೊಂಡು ದರ್ಶನ ಪಡೆಯುವ ಸ್ಥಿತಿ

Team Udayavani, Mar 10, 2022, 6:21 PM IST

ರಾಮೇಶ್ವರನಿಗೆ ನಿತ್ಯ ದುರ್ನಾತದ ಮಜ್ಜನ

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಹಳ್ಳದ ರಾಮೇಶ್ವರನಿಗೆ ನಿತ್ಯ ದುರ್ನಾತದ ಮಜ್ಜನವಾಗುತ್ತದೆ. ದೇವಾಲಯದ ಬಡದಲ್ಲಿ ಹರಿಯುವ ಯಗಚಿಹಳ್ಳಿದಲ್ಲಿ ನಗರದ ಕಲುಷಿತ ನೀರು ಹರಿಯುತ್ತಿದ್ದು, ದೇವರ ದರ್ಶನಕ್ಕೆ ಬರುವ ಭಕ್ತರು ಮೂಗು ಮುಚ್ಚಿಕೊಂಡು ದೇವರ ದರ್ಶನ ಪಡೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ರಾಮೇಶ್ವರ ನಗರ ಬಡಾವಣೆಯಲ್ಲಿರುವ ಹಳ್ಳದ ರಾಮೇಶ್ವರ ದೇವಸ್ಥಾನ ಚೋಳರ ಕಾಲದಲ್ಲಿ ನಿರ್ಮಾಣಗೊಂಡಿದೆ ಎನ್ನಲಾಗುತ್ತಿದೆ. 300ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನಕ್ಕೆ ನಿತ್ಯ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತಾರೆ. ನಗರದ ಬೋಳರಾಮೇಶ್ವರ ದೇವಸ್ಥಾನದ ಮೂಲಸ್ಥಾನ ಇದಾಗಿತ್ತು ಎಂದು ಹೇಳಲಾಗುತ್ತದೆ.

ಯಗಚಿ ಹಳ್ಳದ ತಟದಲ್ಲಿರುವ ದೇವಸ್ಥಾನದ ಸಂಪೂರ್ಣವಾಗಿ ಬಂಡೆಗಲ್ಲಿನಿಂದ ಕೂಡಿದ್ದು, ದೇವಸ್ಥಾನ ಈ ಹಿಂದೆ ಚಿಕ್ಕದಾಗಿತ್ತು. ಹಳ್ಳದ ರಾಮೇಶ್ವರ ದೇವಸ್ಥಾನ ಸೇವಾ ಸಂಘವನ್ನು ರಚಿಸಿಕೊಂಡು ಬಡಾವಣೆಯ ಸುತ್ತಮುತ್ತಲ ಜನರು ದೇವಸ್ಥಾನದ ಜೀರ್ಣೋದ್ಧಾರ ಮಾಡಿ  ಅಭಿವೃದ್ಧಿಪಡಿಸಲಾಗಿದೆ. ದೇವಸ್ಥಾನದ ಗರ್ಭಗುಡಿಯ ಮೇಲಾºಗದಲ್ಲಿ ಬೃಹತ್‌ ಗಾತ್ರದ ಈಶ್ವರದ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ರಾಮೇಶ್ವರನಿಗೆ ನಿತ್ಯ ಪೂಜೆ ವಿಧಿ ವಿಧಾನಗಳು ನಡೆಯುತ್ತಿದ್ದು, ನೂರಾರು ಭಕ್ತರು ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಕೊಳ್ಳುತ್ತಾರೆ.

ಯಗಚಿ ಹಳ್ಳದ ತಟದಲ್ಲಿರುವುದರಿಂದ ಇದಕ್ಕೆ ಹಳ್ಳದ ರಾಮೇಶ್ವರ ಎಂದು ಹೆಸರು ಬಂದಿದ್ದು, ಶ್ರದ್ಧಭಕ್ತಿಯ ಕೇಂದ್ರವಾಗಿದೆ. ಮುಳ್ಳಯ್ಯನಗಿರಿ ಪರ್ವತಶ್ರೇಣಿಯಲ್ಲಿ  ಹುಟ್ಟುವ ಯಗಚಿ ಹಳ್ಳ ರಾಮನಹಳ್ಳಿ ಬಡಾವಣೆ, ಮಧುವನ ಬಡಾವಣೆ ರಾಮೇಶ್ವರ ದೇವಸ್ಥಾನದ ಮುಂಭಾಗ ಹಾದುಹೋಗುವ ಈ ಹಳ್ಳ ಮುಂದೇ ಯಗಚಿ ಡ್ಯಾಂ ಸೇರುತ್ತದೆ.

ಹಿಂದೆ ಈ ಹಳ್ಳದಲ್ಲಿ ಪರಿಶುದ್ಧ ನೀರು ಹರಿಯುತ್ತಿತ್ತು. ಈಗ ನಗರದಲ್ಲಿನ ಬಡಾವಣೆಗಳ ಕೊಳಚೆ ನೀರು ಈ ಹಳ್ಳಕ್ಕೆ ಬಿಡುವುದರಿಂದ ಕಲುಷಿತ ನೀರು ದೇವಸ್ಥಾನದ ಮುಂದೇ ಹರಿಯತ್ತದೆ. ಇದರಿಂದ ದೇವಸ್ಥಾನದ ಸುತ್ತಮುತ್ತ  ದುರ್ನಾತ ಬೀರುತ್ತಿದ್ದು ದೇವಸ್ಥಾನಕ್ಕೆ ಬರುವ ಭಕ್ತರು ಮೂಗು ಮುಚ್ಚಿಕೊಂಡು ದೇವರ ದರ್ಶನ ಪಡೆದುಕೊಳ್ಳುವ ಸ್ಥಿತಿ ಇದೆ.

ಮಳೆಗಾಲದ ಸಂದರ್ಭದಲ್ಲಿ ಹಳ್ಳದಲ್ಲಿ ಭಾರೀ ಪ್ರಮಾಣ ನೀರು ಹರಿಯುತ್ತದೆ. 2021ರಲ್ಲಿ ಸುರಿದ ಭಾರೀ ಮಳೆಗೆ ಹಳ್ಳ ತುಂಬಿ ಹರಿದು ದೇವಸ್ಥಾನದ ಆವರಣಕ್ಕೆ ಕೊಳಚೆ ನೀರು ನುಗ್ಗಿ ತ್ತು. ಈ ಹಿಂದೆ ಯಗಚಿಹಳ್ಳ ವಿಸ್ತಾರವಾಗಿತ್ತು. ಇತ್ತೀಚೆಗೆ ಹಳ್ಳದ ಜಾಗ ಒತ್ತುವರಿ ಆಗಿದ್ದರಿಂದ ಹಳ್ಳ  ಕಿರಿದಾಗಿದೆ. ಇದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಎಂದು ಅಲ್ಲಿನ ಸ್ಥಳೀಯ ನಿವಾಸಿಗರ ಆರೋಪವಾಗಿದೆ.

ರಾಮೇಶ್ವರ ದೇವಸ್ಥಾನ ಬುಡದಲ್ಲಿ ಹರಿಯುವ ಹಳ್ಳ ಮುಂದೇ ಯಗಚಿ ನದಿಯನ್ನು ಸೇರುತ್ತದೆ. ಈ ನೀರನ್ನು ಶುದ್ಧೀಕರಿಸಿ ನಗರದ ಅನೇಕ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಹಳ್ಳಕ್ಕೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಹಳ್ಳದಲ್ಲಿ ಶುಭ್ರವಾದ ನೀರು ಹರಿಯುವಂತೆ ಯೋಜನೆ ರೂಪಿಸಿ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಮತ್ತು ಜನಪ್ರತಿನಿಧಿ ಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಹಳ್ಳದಲ್ಲಿ ನಗರದ ಕೊಳಚೆ ನೀರು ಹರಿಯುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇರಿಸುಮುರಿಸು ಉಂಟಾಗುತ್ತಿದೆ.

ದೇವಸ್ಥಾನದ ಮಗ್ಗಲಲ್ಲೇ ಕೊಳಚೆ ನೀರು ಹರಿಯುತ್ತಿರುವುದರಿಂದ ದುರ್ನಾತದ ಜೊತೆಗೆ ದೇವಸ್ಥಾನದ ಅಂದವನ್ನು ಹಾಳುಗೆಡವುತ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆ ತಕ್ಷಣ ಹಳ್ಳಕ್ಕೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಬೇಕು ಮತ್ತು ಹಳ್ಳವನ್ನು ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹವಾಗಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.