ನಿರಾಶ್ರಿತರ ಕೇಂದ್ರಕ್ಕೆ ಕಾರ್ಮಿಕರು

ತಾಂತ್ರಿಕ ದೋಷ ಅರ್ಜಿ ಸಲ್ಲಿಕೆಗೆ ತೊಂದರೆ

Team Udayavani, May 6, 2020, 5:17 PM IST

5-May-27

ಚಿಕ್ಕಮಗಳೂರು: ಸೇವಾ ಸಿಂಧೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಗರದ ತಾಲೂಕು ಕಚೇರಿಗೆ ಬಂದಿದ್ದ ವಲಸೆ ಕಾರ್ಮಿಕರು.

ಚಿಕ್ಕಮಗಳೂರು: ಲಾಕ್‌ಡೌನ್‌ನಲ್ಲಿ ಸಿಲುಕಿಕೊಂಡಿರುವ ಬೇರೆ ರಾಜ್ಯಗಳ ವಲಸೆ ಕಾರ್ಮಿಕರಿಗೆ ಅವರ ರಾಜ್ಯಗಳಿಗೆ ಕಳಿಸಿಕೊಡಲು ಸರ್ಕಾರ ಆದೇಶ ನೀಡಿ ಸೇವಾಸಿಂಧೂ ಆನ್‌ಲೈನ್‌ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಮಂಗಳವಾರ ತಾಂತ್ರಿಕ ದೋಷದಿಂದ ವೆಬ್‌ಸೈಟ್‌ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ 200 ಕ್ಕೂ ಹೆಚ್ಚು ಕಾರ್ಮಿಕರನ್ನು ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಿದ ಘಟನೆ ಮಂಗಳವಾರ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಆಲದಗುಡ್ಡೆ ಸುತ್ತಮುತ್ತಲ ತೋಟಗಳಲ್ಲಿ ಕಳೆದ ಮೂರು ತಿಂಗಳ ಹಿಂದೆ ಮೆಣಸು ಕೊಯ್ಲಿಗೆ ತಮಿಳುನಾಡು ಸೇಲಂ ಜಿಲ್ಲೆಯ ವೃದ್ಧರು, ಮಕ್ಕಳು, ಮಹಿಳೆಯರು ಹಾಗೂ ಇಬ್ಬರು ಗರ್ಭಿಣಿಯರು ಸೇರಿದಂತೆ 80ಕ್ಕೂ ಮಂದಿ ಲಾಕ್‌ಡೌನ್‌ ನಿಂದ ತಮ್ಮ ಊರುಗಳಿಗೆ ತೆರಳಲಾಗದೆ ತೋಟಗಳಲ್ಲಿ ಸಿಲುಕಿದ್ದರು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ತಮ್ಮ ರಾಜ್ಯಕ್ಕೆ ಹೋಗಲು ಸರ್ಕಾರ ಅವಕಾಶ ನೀಡಿದ್ದರ ಬಗ್ಗೆ ಮಾಹಿತಿ ಪಡೆದ ಕಾರ್ಮಿಕರು ಸೇವಾಸಿಂಧೂ ಆನ್‌ ಲೈನ್‌ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಲು ಮಂಗಳವಾರ ಬೆಳಗ್ಗೆ ತಮ್ಮ ಅಗತ್ಯ ವಸ್ತುಗಳೊಂದಿಗೆ ತಾಲೂಕು ಕಚೇರಿಗೆ ಬಂದಿದ್ದರು.ಸೇವಾಸಿಂಧೂ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸಿ ನಮ್ಮನ್ನು ನಮ್ಮ ರಾಜ್ಯಕ್ಕೆ ಹೋಗಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಸೇವಾ ಸಿಂಧೂ ಆನ್‌ ಲೈನ್‌ ವೆಬ್‌ಸೈಟ್‌ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದು, ಮರು ಚಾಲನೆ ಪಡೆಯಲು ಎರಡು ದಿನ ಕಾಲಾವಕಾಶ ಬೇಕಿದೆ ಎಂದು ಹೇಳಿದ ಹಿನ್ನೆಲೆಯಲ್ಲಿ ಮರಳಿ ತೋಟಕ್ಕೂ ತೆರಳಲಾಗದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಕಾರ್ಮಿಕರು ಕಂಗಾಲಾಗಿದ್ದರು. ಪಶ್ಚಿಮ ಬಂಗಾಳ ರಾಜ್ಯದ 15ಕ್ಕೂ ಹೆಚ್ಚು ಯುವಕರ ತಂಡ ಸಾಮಿಲ್‌ಗ‌ಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಅವರು ತಮ್ಮ ಊರುಗಳಿಗೆ ತೆರಳಲು ಅರ್ಜಿ ಸಲ್ಲಿಸಲು ತಾಲೂಕು ಕಚೇರಿಗೆ ಬಂದಿದ್ದರು.

ಆನ್‌ಲೈನ್‌ ಸ್ಥಗಿತದಿಂದ ಅವರು ಕೂಡ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ದಿಕ್ಕು ಕಾಣದಂತಾಗಿದ್ದರು. ವಿಷಯ ತಿಳಿದ ಜಿಲ್ಲಾಡಳಿತ ಅವರಿಗೆ ನಿರಾಶ್ರಿತ ಕೇಂದ್ರದಲ್ಲಿ ವಾಸ್ತವ್ಯ ಪಡೆಯಲು ಅವಕಾಶ ಮಾಡಿಕೊಟ್ಟಿದೆ. ವಿಜಯಪುರ ಜಿಲ್ಲೆಯ ಹೂವಿನಹಡಗಲಿಗೆ ತೆರಳಲು ಬಂದಿದ್ದ ಸುಮಾರು 30ಕ್ಕೂ ಹೆಚ್ಚು ಮಂದಿ ವಲಸೆ ಕಾರ್ಮಿಕರನ್ನು ತಾಲೂಕು ಕಚೇರಿ ಆವರಣದಿಂದ ಬಸ್‌ಗಳ ಮೂಲಕ ಅವರ ಜಿಲ್ಲೆಗೆ ಕಳಿಸಿಕೊಟ್ಟಿದೆ.

ಸೇವಾ ಸಿಂಧೂ ಆನ್‌ ಲೈನ್‌ ವೆಬ್‌ಸೈಟ್‌ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದು ಮರು ಚಾಲನೆ ಪಡೆಯಲು ಎರಡು ದಿನಗಳ ಬೇಕಾಗುತ್ತದೆ. ಕಾರ್ಮಿಕರು ಮರಳಿ ತೋಟಕ್ಕೆ ಹೋಗಲು ಕಷ್ಟವಾಗುವುದರಿಂದ ಅವರಿಗೆ ನಿರಾಶ್ರಿತ ಕೇಂದ್ರದಲ್ಲಿ ನೆಲೆ ಕಲ್ಪಿಸಿ ವೆಬ್‌ಸೈಟ್‌ ಆರಂಭಗೊಂಡ ನಂತರ ಅವರನ್ನು ಅವರ ರಾಜ್ಯಕ್ಕೆ ಕಳಿಸಿಕೊಡಲಾಗುವುದು.?
ಹರೀಶ್‌ ಪಾಂಡೆ,
ಪೊಲೀಸ್‌ ವರಿಷ್ಠಾಧಿಕಾರಿ

ತಾಂತ್ರಿಕ ದೋಷದಿಂದ ವೆಬ್‌ಸೈಟ್‌ ಸ್ಥಗಿತಗೊಂಡಿದ್ದು ತಮಿಳುನಾಡಿನ ವಲಸೆ ಕಾರ್ಮಿಕರ ಹೆಸರು ವಿಳಾಸಗಳನ್ನು ಪರಿಶೀಲನೆ ನಡೆಸಿ ಪಟ್ಟಿ ತಯಾರಿಸಿಕೊಳ್ಳಲಾಗುತ್ತಿದ್ದು ಅಗತ್ಯ ಕ್ರಮಗಳಿಗಾಗಿ ಜಿಲ್ಲಾಡಳಿತಕ್ಕೆ ಕೋರಲಾಗುವುದು.
ನಂದಕುಮಾರ್‌,
ತಹಶೀಲ್ದಾರ್‌.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.