Road mishap: ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪ್ರಕರಣ: ಓರ್ವ ವಿದ್ಯಾರ್ಥಿನಿ ಮೃತ್ಯು
Team Udayavani, Sep 7, 2023, 1:18 PM IST
ಚಿಕ್ಕಮಗಳೂರು: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ(15) ಎನ್ನಲಾಗಿದೆ.
ತುಳಸಿ, ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದ್ದು ಎಂದಿನಂತೆ ಶಾಲೆಗೆ ತೆರಳಲು ಬಸ್ಸಿಗಾಗಿ ಇತರ ವಿದ್ಯಾರ್ಥಿನಿಯರ ಜೊತೆ ಕಾಯುತ್ತಿದ್ದ ವೇಳೆ ಅತಿವೇಗವಾಗಿ ಬಂದ ಬಸ್ಸು ವಿದ್ಯಾರ್ಥಿನಿಯರ ಮೇಲೆ ಹರಿದು ತುಳಸಿ ಸೇರಿ ಇಬ್ಬರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಿಸದೆ ತುಳಸಿ ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ತುಳಸಿ ತಂದೆ – ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಇದನ್ನೂ ಓದಿ: ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ