ಸೀಲ್ಡೌನ್ ಪ್ರದೇಶಕ್ಕೆ ಘಟನಾ ಕಮಾಂಡರ್ ನೇಮಕ
Team Udayavani, Jun 13, 2020, 1:02 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಸೋಂಕಿತ ಪ್ರದೇಶಗಳನ್ನು ಸರ್ಕಾರದ ನಿರ್ದೇಶನದಂತೆ ಕಂಟೇನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು, ಈ ಪ್ರದೇಶಕ್ಕೆ ಘಟನಾ ಕಮಾಂಡರ್ ಗಳನ್ನು ನೇಮಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಕಡೂರು ತಾಲೂಕು ಹಿರೇನಲ್ಲೂರು ಹೋಬಳಿ ಕೆ.ದಾಸರಹಳ್ಳಿ ಗ್ರಾಮದಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿರುವ ಪ್ರದೇಶವನ್ನು ನಿಯಂತ್ರಿತ ವಲಯವನ್ನಾಗಿ ಘೋಷಿಸಲಾಗಿದೆ. ಈ ಪ್ರದೇಶಕ್ಕೆ ಘಟನಾ ಕಮಾಂಡರ್ರಾಗಿ ಕಡೂರು ತಾಲೂಕು ತಹಶೀಲ್ದಾರ್ ಜೆ.ಉಮೇಶ್ ಅವರನ್ನು (ಮೊ.ಸಂ. 9900322396)ನೇಮಿಸಲಾಗಿದೆ. ನಿಯಂತ್ರಿತ ವಲಯದ ಸುತ್ತಮುತ್ತಲಿನ 5.ಕಿ.ಮೀ. ವ್ಯಾಪ್ತಿ ಪ್ರದೇಶ ನಿರ್ವಹಿಸಲಿದ್ದು, ಕೆ.ದಾಸರಹಳ್ಳಿ ಅಂಗನವಾಡಿ ಕೇಂದ್ರದಿಂದ ಘಟನಾ ನಿಯಂತ್ರಣ ಕೇಂದ್ರದ ಮೇಲ್ವಿಚಾರಣೆ ಮಾಡಲು ತಿಳಿಸಲಾಗಿದೆ.
ಘಟನಾ ಕಮಾಂಡರ್ ಘಟನಾ ನಿಯಂತ್ರಣ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದ್ದು, ಘಟನಾ ಕೇಂದ್ರದ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಅಗತ್ಯ ವಸ್ತುಗಳ ಸೇವೆಯನ್ನು ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ