Chikkamagaluru; ಯುವಕನ್ನು ರಾತ್ರೋರಾತ್ರಿ ಕಾರಿನಲ್ಲಿ ಕರೆದೊಯ್ದು ಕೊಲೆ ಮಾಡಿದ ಸ್ನೇಹಿತರು!
Team Udayavani, Feb 16, 2024, 5:20 PM IST
ಚಿಕ್ಕಮಗಳೂರು: ರಾತ್ರೋರಾತ್ರಿ ಕಾರಿನಲ್ಲಿ ಕರೆದೊಯ್ದ ಮೂವರು ಯುವಕರು ತಮ್ಮ ಸ್ನೇಹಿತನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಹೊಸೂರು ಸಮೀಪ ನಡೆದಿದೆ.
ಬೆಂಗಳೂರಿಂದ ಅಜ್ಜಿಯ ಮನೆಗೆ ಬಂದಿದ್ದ ಯುವಕನನ್ನು ಕರೆ ಮಾಡಿ ಕರೆಸಿಕೊಂಡ ಸ್ನೇಹಿತರು ಕತ್ತು ಕೊಯ್ದು ಮರ್ಡರ್ ಮಾಡಿರುವ ಘಟನೆ ಕಡೂರಿನ ಮಾಡಾಳು ಹೊಸೂರು ಸಮೀಪ ನಡೆದಿದೆ.
ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್ ಕೊಲೆಯಾದ ಯುವಕ. ಕಳೆದ ರಾತ್ರಿ ಬೆಂಗಳೂರಿನಿಂದ ಮೂರ್ನಾಲ್ಕು ಜನ ಸ್ನೇಹಿತರು ಅಜ್ಜಿಯ ಮನೆಯಲ್ಲಿದ್ದ ದರ್ಶನ್ ನನ್ನು ಕರೆಸಿಕೊಂಡು ಮಧ್ಯರಾತ್ರಿ ಕೊಲೆ ಮಾಡಿದ್ದಾರೆ.
ಮೂಲತಃ ಮಧುಗಿರಿಯವನಾಗಿದ್ದ ದರ್ಶನ್ ಬೆಂಗಳೂರಿನ ಆರ್.ಆರ್ ನಗರದಲ್ಲಿ ವಾಸವಿದ್ದ ಎನ್ನಲಾಗಿದ್ದು, ಮೊನ್ನೆ ಕಡೂರಿನ ಅಜ್ಜಿ ಮನೆಗೆ ಬಂದಿದ್ದಾನೆ. ಇದನ್ನು ತಿಳಿದ ಆತನ ಮೂವರು ಸ್ನೇಹಿತರು ಕಡೂರಿಗೆ ಬರುತ್ತಿದ್ದೇವೆ ಬಾ ಎಂದು ಕರೆಸಿಕೊಂಡು ದರ್ಶನ್ ಮಾವ ಸೋಮಶೇಖರ್ ಗೆ ವಿಡಿಯೋ ಕಾಲ್ ಮಾಡಿದ್ದಾರೆ.
ಸ್ನೇಹಿತರ ಜೊತೆ ಹೋಗಿ ಬರುತ್ತೇನೆಂದು ಹೋದವನು ಶವವಾಗಿ ಬಂದಿದ್ದಾನೆ, ಹಣಕಾಸಿನ ವಿಚಾರ ಅಥವಾ ಹುಡುಗಿ ವಿಷಯಕ್ಕೆ ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಇತ್ತೀಚೆಗೆ ಪ್ರಕರಣವೊಂದರಲ್ಲಿ ಜೈಲುವಾಸ ಅನುಭವಿಸಿ ಕೆಲವು ದಿನಗಳ ಹಿಂದೆ ದರ್ಶನ್ ಬಿಡುಗಡೆಯಾಗಿದ್ದ.
ಕಡೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?