Chikkamagaluru: ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ

ಹೊಸ ಸೇತುವೆ ದನಗಳ್ಳರಿಗೆ ವರದಾನ..!

Team Udayavani, May 27, 2023, 11:08 PM IST

police

ಚಿಕ್ಕಮಗಳೂರು: ಎರಡು ಗೋವುಗಳ ತಲೆ, ಎಂಟು ಕಾಲು ಹಾಗೂ ಮೂಳೆಗಳು ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿ ಪತ್ತೆಯಾಗಿರೋ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ.

ಪ್ರತಿ ಮಳೆಗಾಲದಲ್ಲೂ ಮಾಗುಂಡಿ ಸಮೀಪದ ಮಹಲ್ಗೋಡು ಸೇತುವೆ ಸಂಪೂರ್ಣ ಮುಳುಗುತ್ತಿತ್ತು. ಯಾವ ಮಟ್ಟಕ್ಕೆ ಅಂದ್ರೆ ದಿನಕ್ಕೆ ಐದಾರು ಬಾರಿ ಗಂಟೆಗಟ್ಟಲೇ ಸೇತುವೆ ಮೇಲೆ ಐದಾರು ಅಡಿ ನೀರು ಹರಿಯುತ್ತಿತ್ತು. ಬಾಳೆಹೊನ್ನೂರು-ಕಳಸ ಮುಖ್ಯ ಮಾರ್ಗದ ಈ ರಸ್ತೆಯಲ್ಲಿ ಗಂಟೆಗಟ್ಟಲೇ ವಾಹನ ಸಂಚಾರ ಕೂಡ ಜಾಮ್ ಆಗುತ್ತಿತ್ತು. ಹಾಗಾಗಿ, ಸ್ಥಳಿಯರ ಹಲವು ವರ್ಷಗಳ ಬೇಡಿಕೆಯಂತೆ ಈ ಬಾರಿ ಈ ಮಹಲ್ಗೋಡು ಗ್ರಾಮಕ್ಕೆ ಹೊಸ ಸೇತುವೆ ನಿರ್ಮಾಣವಾಗಿದೆ. ಊರಿನಿಂದ ಸ್ವಲ್ಪ ದೂರದಲ್ಲಿ ಇರುವ ಈ ಸೇತುವೆ ದನಗಳ್ಳರಿಗೆ ವರದಾನವಾದಂತೆ ಕಾಣುತ್ತಿದೆ.

ಏಕೆಂದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ದನಗಳ್ಳರ ಹಾವಳಿ ಹೊಸತೇನಲ್ಲ. ದಶಕಗಳಿಂದ ನೂರಾರು ರಾಸುಗಳು ದನಗಳ್ಳರ ಪಾಲಾಗಿವೆ. ಕಾರುಗಳಲ್ಲಿ ದನಗಳನ್ನ ಸಾಗಿಸೋದು ಕಷ್ಟ. ಗೋಮಾಂಸವನ್ನ ಸಾಗಿಸೋದು ಸುಲಭ. ಹಾಗಾಗಿ, ಸ್ವಲ್ಪ ಎತ್ತರದಲ್ಲಿ ನಿರ್ಮಾಣವಾಗಿರೋ ಸೇತುವೆ ದನಗಳ್ಳರ ಪಾಲಿಗೆ ವರವಾದಂತೆ ಕಾಣುತ್ತಿದೆ. ರಾತ್ರಿ ವೇಳೆಯಲ್ಲಿ ಜನಸಾಮಾನ್ಯರ ಓಡಾಟ ಕಡಿಮೆ ಇರುವ ಈ ಸೇತುವೆ ಕೆಳಭಾಗದಲ್ಲಿ ಸಮೃದ್ಧ ಜಾಗವಿರೋದ್ರಿಂದ ದನಗಳ್ಳರು ಅದೇ ಸೇತುವೆ ಕೆಳಗೆ ದನಗಳನ್ನ ಕಡಿದು ತಲೆ-ಕಾಲುಗಳನ್ನ ಅಲ್ಲೇ ಬಿಟ್ಟು ಮಾಂಸವನ್ನ ಕೊಂಡೊಯ್ದಿದ್ದಾರೆ.

ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆದರೆ, ಕಳೆದ ಎರಡು ದಿನದ ಹಿಂದೆ ಮೂಡಿಗೆರೆ ತಾಲೂಕಿನ ರಾಸುವೊಂದು ಕಳ್ಳತನವಾಗಿತ್ತು. ಈ ರಾಸು ಅದೇ ಇರಬಹುದಾ ಎಂದು ಸ್ಥಳಿಯರು ಅಂದಾಜು ಕೂಡ ಮಾಡಿದ್ದಾರೆ. ಆದರೆ, ಮಲೆನಾಡಲ್ಲಿ ಮೇಲಿಂದ ಮೇಲೆ ರಾಸುಗಳ ಮೂಲಕವೇ ಜೀವನ ಕಟ್ಟಿಕೊಂಡವರ ರಾಸುಗಳು ಕೂಡ ಕಳ್ಳತನವಾಗುತ್ತಿವೆ. ಹಾಗಾಗಿ, ಮಲೆನಾಡಿಗರು ಈ ಗೋಕಳ್ಳರ ಹಾವಳಿಗೆ ಎಂದು ಬ್ರೇಕ್ ಬೀಳುವುದೋ ಎಂದು ಗೋಕಳ್ಳರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.