ಕ್ರೀಡೆ-ಯೋಗದಿಂದ ಸದೃಢ ಆರೋಗ್ಯ

ಜಿಲ್ಲಾ ಉತ್ಸವಥಾನ್‌ ನಡಿಗೆಗೆ ಚಾಲನೆ 28ರಂದು 500 ಕಲಾವಿದರಿಂದ ಬೃಹತ್‌ ಸಾಂಸ್ಕೃತಿಕ ಮೆರವಣಿಗೆ

Team Udayavani, Feb 24, 2020, 12:55 PM IST

24-February-11

ಚಿಕ್ಕಮಗಳೂರು: ಆರೋಗ್ಯ ಸಂಪತ್ತನ್ನು ನಮ್ಮದಾಗಿಸಿಕೊಳ್ಳುವುದಕ್ಕೆ ಪ್ರತಿಯೊಬ್ಬರೂ ಯೋಗದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

ಭಾನುವಾರ ನಗರದ ಸುಭಾಷ್‌ ಚಂದ್ರ ಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಉತ್ಸವದ ಅಂಗವಾಗಿ ಆಯೋಜಿಸಿದ್ದಫಿಟ್‌ ಚಿಕ್ಕಮಗಳೂರು (ಉತ್ಸವಥಾನ್‌ ನಡಿಗೆ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಆದ್ದರಿಂದ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಯೋಗ, ಕ್ರೀಡೆಯಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆದ್ದರಿಂದ ಚಿಕ್ಕಮಗಳೂರು ಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ಹಲವು ಕ್ರಿಯಾ ಚಟುವಟಿಕೆಗಳನ್ನು ಏರ್ಪಡಿಸಲಾಗಿದ್ದು, ಉತ್ಸವ ನಡಿಗೆ ಮೂಲಕ ಮೊದಲ ಹೆಜ್ಜೆ ಹಾಕಲಾಗಿದೆ ಎಂದರು.

ಪ್ರತಿಭೆ ಹೊರಹಾಕಲು ಉತ್ತಮ ವೇದಿಕೆ ನಿರ್ಮಾಣವಾಗಿದ್ದು, ಜಿಲ್ಲಾ ಉತ್ಸವ ಹಿನ್ನೆಲೆ ಇಂದಿನಿಂದ ಗ್ರಾಮೀಣ ಕ್ರೀಡಾಕೂಟ ಪ್ರಾರಂಭಗೊಂಡಿದೆ. ನಗರದ ಹೊರವಲಯದಲ್ಲಿ ಕೆಸರುಗದ್ದೆ ಓಟ, ಭಾರ ಎತ್ತಿಕೊಂಡು ಓಡುವ ಸ್ಪರ್ಧೆ, ಹಗ್ಗ ಜಗ್ಗಾಟ, ನಿಧಿ
ಹುಡುಕುವ ಸ್ಪರ್ಧೆ ಹಾಗೂ ನಗರದ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಗಾಳಿಪಟ ಹಾರಿಸುವುದು, ಮಡಿಕೆ ಒಡೆಯುವುದು, ಮ್ಯೂಸಿಕಲ್‌ ಚೇರ್‌ ಸ್ಪರ್ಧೆಗಳು ನಡೆಯುತ್ತವೆ ಎಂದರು.

ವಿವಿಧ ವಯೋಮಿತಿಗೆ ಅನುಗುಣವಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದ್ದು, ಇಂದು ರಾಜ್ಯಮಟ್ಟದ ಯೋಗ, ಟೆಕ್ವಾಂಡೋ ಹಾಗೂ ಚೆಸ್‌ ಪಂದ್ಯಾವಳಿಗಳು, ಫೆ.24ರಂದು ಜಿಲ್ಲಾಮಟ್ಟದ ಕಬಡ್ಡಿ, ವಾಲಿಬಾಲ್‌ ಹಾಗೂ ಫೆ.25 ರಂದು ರಾಜ್ಯಮಟ್ಟದ ಕಬಡ್ಡಿ, ವಾಲಿಬಾಲ್‌ ಮತ್ತು ಸಾಹಸ ಕ್ರೀಡೆಗಳು ನಡೆಯಲಿದೆ ಎಂದು ಹೇಳಿದರು.

ಫೆ.28 ರಂದು ವಿವಿಧ ಕಲಾತಂಡಗಳ 500 ಕಲಾವಿದರಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಮೆರವಣಿಗೆ ಜರುಗಲಿದೆ. ಸಂಜೆ 6.30 ಗಂಟೆಗೆ ಜಿಲ್ಲಾ ಆಟದ ಮೈದಾನದ ಮುಖ್ಯ ವೇದಿಕೆಯಲ್ಲಿ ಜಾನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಉತ್ಸವ ಪ್ರಾರಂಭವಾಗಲಿದೆ ಎಂದರು.

ಉತ್ಸವದಲ್ಲಿ ಆಹಾರ ಮೇಳ, ವಸ್ತು ಪ್ರದರ್ಶನ, ರಿಯಾಲಿಟಿ ಶೋಗಳಲ್ಲಿ ಪ್ರಸಿದ್ಧಿ ಹೊಂದಿರುವ ಸಂಗೀತಗಾರರಿಂದ ಸುಗಮ ಸಂಗೀತ, ಸೃತ್ಯ ಹಾಗೂ ಆಳ್ವಾಸ್‌ ಕಲಾ ತಂಡಗಳ ಕಲಾ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಉತ್ಸವಥಾನ್‌ ನಡಿಗೆಯಲ್ಲಿ ಸಾರ್ವಜನಿಕರು, ವಿವಿಧ ಶಾಲೆಯ ಮಕ್ಕಳು, ಇಲಾಖೆ ಅಧಿಕಾರಿಗಳು ಸೇರಿದಂತೆ 8 ಸಾವಿರಕ್ಕೂ ಹೆಚ್ಚಿನ ಜನರು ಪಾಲ್ಗೊಂಡಿದ್ದರು. ಜಾಥಾನಡಿಗೆ ನಗರದ ಸುಭಾಷ್‌ ಚಂದ್ರ ಬೋಸ್‌ ಜಿಲ್ಲಾ ಆಟದ ಮೈದಾನದಿಂದ, ಆರಂಭವಾಗಿ ಐ.ಜಿ.ರಸ್ತೆ, ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಜಿಲ್ಲಾ ಆಟದ ಮೈದಾನ ತಲುಪಿತು. ಜಾಥದಲ್ಲಿ ವಂದೇ ಮಾತರಂ, ಭಾರತ್‌ ಮಾತಾ ಕೀ ಜೈ, ಬನ್ನಿ ಬಿನ್ನಿ ಚಿಕ್ಕಮಗಳೂರು ಹಬ್ಬದಲ್ಲಿ ಭಾಗವಹಿಸಿ ಎಂಬ ಘೋಷಗಳು ಮುಳುಗಿದವು.

ಇದೇ ಸಂದರ್ಭದಲ್ಲಿ ಫಿಟ್‌ ಚಿಕ್ಕಮಗಳೂರು ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ.ರವಿ ಯೋಗ ಚಟುವಟಿಕೆಗೆ ಚಾಲನೆ ನೀಡಿದರು. ನಗರದ ಪತಂಜಲಿ ಯೋಗ ಸಂಸ್ಥೆಯವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್‌ಕುಮಾರ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.