ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯ ಭೀಕರ ಸಾವು
Team Udayavani, Nov 20, 2022, 8:58 AM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ್ದಾರೆ. 45 ವರ್ಷದ ಶೋಭಾ ಅಮೃತ ದುರ್ದೈವಿಯಾಗಿದ್ದು, ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ.
ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಶೋಭಾ ಎಂಬ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ. ಗ್ರಾಮಸ್ಥರು ಭಯ ಬೀತರಾಗಿದ್ದು ಹಾಡು ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ಸಾರ್ವಜನಿಕರು ತಿಳಿಸಿದಾಗಲೇ ಅವುಗಳನ್ನು ಕಾಡಿಗಟ್ಟಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು