ಚಿಕ್ಕಮಗಳೂರು: ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿಯ ಎಂ.ಕೆ.ಪ್ರಾಣೇಶ್
Team Udayavani, Dec 14, 2021, 12:42 PM IST
ಚಿಕ್ಕಮಗಳೂರು: ಸಂಸ್ಥೆಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಜಿದ್ದಾಜಿದ್ದಿನ ಕಣದಲ್ಲಿ ಫಲಿತಾಂತ ಭಾರೀ ಕುತೂಹಲ ಕೆರಳಿಸಿತ್ತು. ಮೊದಲ ಸುತ್ತಿನಿಂದ ಅತ್ಯಂತ ಪೈಪೋಟಿ ಏರ್ಪಟಿದ್ದು, ಅಂತಿಮವಾಗಿ ಆರು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರಾಭವಗೊಂಡರು.
2410 ಮತಗಳ ಪೈಕಿ 39 ಮತಗಳು ಅಸಿಂಧುಗೊಂಡಿದ್ದು ಎಂ.ಕೆ ಪ್ರಾಣೇಶ 1188 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1182 ಮತಗಳನ್ನು ಪಡೆದುಕೊಂಡರು.
ಇದನ್ನೂ ಓದಿ:ಪರಿಷತ್ ಫೈಟ್: ಚಿತ್ರದುರ್ಗ, ಉ. ಕನ್ನಡ, ಚಿಕ್ಕಮಗಳೂರು, ಮಂಗಳೂರು ಕ್ಷೇತ್ರದ ಫಲಿತಾಂಶ ಪ್ರಕಟ
ಕಾಂಗ್ರೆಸ್ ಅಭ್ಯರ್ಥಿ ಆರು ಮತಗಳಿಂದ ಪರಭವಗೊಂಡಿದ್ದರಿಂದ ಚುನಾವಣಾ ಅಧಿಕಾರಿಗಳ ಬಳಿ ಮರು ಮತ ಎಣಿಕೆಗೆ ಮನವಿ ಮಾಡಿದ್ದಾರೆ. ಆದರೆ ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮರು ಮತ ಎಣಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತಗಟ್ಟೆಗೆ ನುಗ್ಗುವ ಯತ್ನವನ್ನೂ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ