ಮಹಿಳೆಯರು ಯಾರಿಗೂ ಕಡಿಮೆ ಇಲ್ಲ

ಮಹಿಳಾ ದಿನಾಚರಣೆಯಲ್ಲಿ 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಸಿ.ಎಸ್‌.ಶರ್ಮಿಳಾ ಅಭಿಮತ

Team Udayavani, Mar 12, 2020, 3:30 PM IST

12-March-18

ಚಿಕ್ಕಮಗಳೂರು: ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಕಾರ್ಯ ನಿರ್ವಹಿಸುತ್ತಾ ನಾವು ಯಾರಿಗಿಂತ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ ಎಂದು 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಸಿ.ಎಸ್‌.ಶರ್ಮಿಳಾ ಹೇಳಿದರು.

ನಗರದ ವಿಜಯಪುರದಲ್ಲಿರುವ ಕಸ್ತೂರ ಬಾ ಸದನದಲ್ಲಿನ ವೃತ್ತಿನಿರತ ಮಹಿಳೆಯರ ವಸತಿ ನಿಲಯದಲ್ಲಿ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಸ್ತೂರ ಬಾ ಸದನದ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳಾ ದಿನ ಆಚರಣೆ ನ್ಯೂ ಯಾರ್ಕ್‌ನಲ್ಲಿ ಕ್ಲಾರಾ ಜಟ್ಕಿನ್‌ ಎನ್ನುವ ಮಹಿಳೆಯೊಬ್ಬಳು ಸಮಾನ ವೇತನ, ಸಮಾನ ಹಕ್ಕಿಗಾಗಿ ಹೋರಾಡಿದ ದಿನವಾಗಿದೆ. ಅದರ ಸವಿ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ. ಇಂದಿನ ಯುಗದಲ್ಲಿ ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಬಾಹ್ಯಾಕಾಶ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ವೇದಗಳ ಕಾಲದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ, ಗೌರವವಿತ್ತು. ಆದರೆ, ಇಂದು ಮಹಿಳೆಯ ದೇಹ ರಚನೆ, ದೈಹಿಕ ವ್ಯತ್ಯಾಸದಿಂದಾಗಿ ಆಕೆಯನ್ನು ಅಬಲೆಯಂತೆ ಬಿಂಬಿಸಿ ಅಸಮಾನತೆಯಿಂದ ಕಾಣಲಾಗುತ್ತಿದೆ. ಯಾವೊಬ್ಬ ಮಹಿಳೆಯೂ ಅಬಲೆಯಲ್ಲ, ಸಬಲೆ. ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಸೇರಿದಂತೆ ಹಲವು ವೀರ ನಾರಿಯರು ಜನಿಸಿದ ನಾಡಿನಲ್ಲಿ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕೆಂದು ತಿಳಿಸಿದರು.

3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾ ಧೀಶೆ ಕೆ.ಆರ್‌.ದೀಪಾ ಮಾತನಾಡಿ, ಯಾವುದೇ ದೇಶ ಅಭಿವೃದ್ಧಿಯಾಗಬೇಕಾದರೆ ಮೊದಲು ಮಹಿಳೆಯರು ಪ್ರಗತಿ ಹೊಂದಬೇಕು. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಾಧನೆ ಮಾಡಿದಾಗ ಸಬಲೀಕರಣ ಸಾಧ್ಯ ಎಂದರು.

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ, ಕಿರುಕುಳ ಹಾಗೂ ಅತ್ಯಾಚಾರದಂತಹ ಪ್ರಕರಣಗಳು ಕಂಡುಬರುತ್ತಿದ್ದು ದೌರ್ಜನ್ಯ ತಡೆಯಲು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾನೂನು ಸೇವಾ ಪ್ರಾ ಧಿಕಾರಗಳಿದ್ದು, ಅವುಗಳ ಉಪಯೋಗ ಪಡೆದುಕೊಳ್ಳುಬೇಕು. ಮಹಿಳೆಯರು ಹಕ್ಕು ಸಂರಕ್ಷಣೆಗಾಗಿ ಕಾನೂನು ರೂಪಿಸಲಾಗಿದ್ದು, ನೊಂದ ಮಹಿಳೆಯರು ಸೂಕ್ತ ನ್ಯಾಯ ಪಡೆದುಕೊಳ್ಳವಂತೆ ತಿಳಿಸಿದರು.

ಕಸ್ತೂರ ಬಾ ಸದನದ ಅಧ್ಯಕ್ಷೆ ಯಮುನ ಚೆನ್ನಬಸಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸೇನೆ, ಬಾಹ್ಯಾಕಾಶ, ರಾಜಕೀಯ ಸೇರಿದಂತೆ ಪ್ರತಿಯೊಂದು ರಂಗದಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಪ್ರಾಮಾಣಿಕ ಹಾಗೂ ಶಕ್ತಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಹಿಳೆ ಯರು ಮತ್ತಷ್ಟು ಸಬಲರಾಗಿ ಉನ್ನತ ಸ್ಥಾನ ಗಳಿಸಬೇಕು. ಜೊತೆಗೆ ಸ್ವತಂತ್ರವಾಗಿ ಆಲೋಚಿಸುವ, ಸ್ವಾವಲಂಬಿಯಾಗಿ ಬದುಕುವ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕಬೇಕೆಂದರು.

ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಹಾಯಕ ನಿರ್ದೇಶಕಿ ಡಾ| ಎಚ್‌.ಪಿ.ಮಂಜುಳಾ ಮಹಿಳಾ ಸಬಲೀಕರಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹೇಮಾ, ಕಸ್ತೂರ ಬಾ ಸದನದ ಉಪಾಧ್ಯಕ್ಷೆ ಯಶೋಧ ಲಕ್ಷ್ಮಣ್‌ ಗೌಡ, ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.