ಸಹಜ ಸ್ಥಿತಿಯತ್ತ ಚಿಕ್ಕಮಗಳೂರು


Team Udayavani, Dec 5, 2017, 6:00 AM IST

Ban05121701Medn.jpg

ಚಿಕ್ಕಮಗಳೂರು/ಹುಣಸೂರು: ದತ್ತ ಜಯಂತಿ ಆಚರಣೆ ವೇಳೆ ಗಲಾಟೆ ನಡೆದು ಉದ್ವಿಗ್ನಗೊಂಡಿದ್ದ ಚಿಕ್ಕಮಗಳೂರು ಹಾಗೂ ಹುಣಸೂರು ಸಹಜ ಸ್ಥಿತಿಗೆ ಮರಳಿದೆ. ಭಾನುವಾರ ಬೆಳಗ್ಗೆಯಿಂದ ಚಿಕ್ಕಮಗಳೂರಿನ ವಿವಿಧೆಡೆ ಕಲ್ಲು ತೂರಾಟ, ಯುವಕರಿಬ್ಬರ ಮೇಲೆ ಹಲ್ಲೆ ನಡೆದ ನಂತರ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿತ್ತು. ಈ ಮಧ್ಯೆ ರಾತ್ರಿ ನಗರದ ತಮಿಳು ಕಾಲೋನಿಯಲ್ಲಿ ಪೊಲೀಸರು ಪೆಟ್ರೋಲ್‌ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ತಮಿಳು ಕಾಲೋನಿ ಬಳಿ ದತ್ತಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿ ಬಾಂಬ್‌ ಎಸೆಯುವ ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ಸಿಕ್ಕ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು 5 ಪೆಟ್ರೋಲ್‌ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ರಾತ್ರಿ ತಮಿಳುಕಾಲೋನಿ ಬಳಿ ಗುಂಪೊಂದು ದತ್ತಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿತು. ಇದನ್ನು ತಡೆಯಲು ಹೋದ ಪೊಲೀಸರ ಮೇಲೂ ಕಲ್ಲು ತೂರಿ ಒಂದು ಪೆಟ್ರೋಲ್‌ ಬಾಂಬ್‌ ಎಸೆಯಲಾಗಿದೆ. ಅದೃಷ್ಟವಶಾತ್‌ ಇದರಿಂದ ಯಾರಿಗೂ ಗಾಯಗಳಾಗಿಲ್ಲ. ಕಾರ್ಯಾಚರಣೆ ನಡೆಸಿದ ಪೊಲೀಸರು 13 ಜನರನ್ನು ಬಂಧಿಸಿ ಪೆಟ್ರೋಲ್‌ ಬಾಂಬ್‌ ವಶಪಡಿಸಿಕೊಂಡು ಗಲಭೆ ಹೆಚ್ಚಿಸುವ ಸಂಚನ್ನು ವಿಫಲಗೊಳಿಸಿದ್ದಾರೆ.

ದತ್ತ ಜಯಂತಿ ಗಲಾಟೆಗೆ ಸಂಬಂಧಿಸಿದಂತೆ ಒಟ್ಟೂ ಮೂರು ಪ್ರಕರಣ ದಾಖಲಾಗಿದೆ. ಒಟ್ಟು  32 ಮಂದಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಕೆ.ಅಣ್ಣಾಮಲೈ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆಯಿಂದ ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆ ನಡೆದ ತಕ್ಷಣ ಅದನ್ನು ನಿಯಂತ್ರಣಕ್ಕೆ ತರಲಾಗಿತ್ತು. ರಾತ್ರಿ ನಗರದ ತಮಿಳು ಕಾಲೋನಿಯ ಬಳಿ ದತ್ತಮಾಲಾಧಾರಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಯಿತು. ಕೂಡಲೆ ಕಾರ್ಯಾಚರಣೆ ನಡೆಸಿ 13 ಜನರನ್ನು ಬಂಧಿಸಲಾಯಿತು. ಅವರಲ್ಲಿ 4 ಜನ ಅಪ್ರಾಪ್ತ ವಯಸ್ಸಿನ ಯುವಕರೂ ಇದ್ದಾರೆ ಎಂದು ಹೇಳಿದರು.

32 ಜನರ ಬಂಧನ: ದತ್ತಜಯಂತಿಯಂದು ಪೀಠದಲ್ಲಿ ಗೋರಿ ಕೀಳುವ ಯತ್ನ, ನಗರದಲ್ಲಿ ನಡೆದ ದಾಳಿ ಎಲ್ಲವೂ ಸೇರಿ ಒಟ್ಟಾರೆ 3 ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಒಟ್ಟು 32 ಜನರನ್ನು ಬಂಧಿಸಲಾಗಿದೆ. 3 ವಾಹನ ಹಾಗೂ 5 ಪೆಟ್ರೋಲ್‌ ಬಾಂಬ್‌ ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ಭಾನುವಾರ ದತ್ತಭಕ್ತರು ಸಾಲಿನಲ್ಲಿ ನಿಂರು ಪಾದುಕೆ ದರ್ಶನ ಪಡೆಯುತ್ತಿರುವ ವೇಳೆ  ಓರ್ವ ಯುವಕ ನಿರ್ಬಂಧಿತ ಪ್ರದೇಶಕ್ಕೆ ನುಗ್ಗಿ ಅಲ್ಲಿ ಭಗವಾಧ್ವಜ ಹಾರಿಸಿದ. ಆ ಯುವಕ ತರೀಕೆರೆಯವನು ಎಂದು ಗುರುತಿಸಲಾಗಿದೆ. ಆತನನ್ನು ಪೊಲೀಸರು ಹೊರ ಕಳುಹಿಸಿದರು. ಆಗ ದತ್ತಮಾಲಾಧಾರಿಗಳ ಗುಂಪೊಂದು ದತ್ತಪೀಠದ ಮುಖ್ಯ ನಿರ್ಬಂಧಿತ ಪ್ರದೇಶಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದಿದ್ದಾರೆ. ಆಗ ಅಪಾರ ಸಂಖ್ಯೆಯಲ್ಲಿದ್ದ ಮತ್ತೂಂದು ಗುಂಪು ಇದನ್ನು ಪ್ರಶ್ನಿಸಿ ಗಲಾಟೆ ಮಾಡಿದೆ. ಈ ಸಂದರ್ಭದಲ್ಲಿ ಏಳೆಂಟು ಜನರಿದ್ದ ದತ್ತಭಕ್ತರ ತಂಡ ಮುಖ್ಯ ನಿರ್ಬಂಧಿತ ಪ್ರದೇಶದ ಪಕ್ಕದಲ್ಲಿರುವ ಗೋರಿಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ಒಂದೆರೆಡು ಜನ ಗೋರಿಗೆ ಹಾನಿ ಉಂಟು ಮಾಡಿದ್ದಾರೆ. ಸ್ಥಳೀಯ ಪೊಲೀಸರು ಅವರನ್ನೂ ಕೂಡ ಹೊರಹಾಕಿದ್ದಾರೆ. ಯಾರೆಲ್ಲಾ ಗೋರಿಗೆ ಹಾನಿ ಉಂಟುಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ವಾರದೊಳಗೆ ಬಂಧಿಸಲಾಗುವುದು. ವಿಡಿಯೋ ರೆಕಾರ್ಡ್‌, ಡ್ರೋಣ್‌ ಕ್ಯಾಮೆರಾದಲ್ಲಿ ಸೆರೆಯಾದ ಫೋಟೋಗಳು ಇವರ ಪತ್ತೆಗೆ ಸಹಕಾರಿಯಾಗಲಿವೆ ಎಂದು ಹೇಳಿದರು.

ನಗರದ ಉಪ್ಪಳ್ಳಿಯಲ್ಲಿ ಬಜರಂಗದಳ ಕಾರ್ಯಕರ್ತರಿದ್ದ ಬಸ್‌ ಮೇಲೆ ಕಲ್ಲು ತೂರಿದ ಪ್ರಕರಣದಲ್ಲಿ ಪ್ರದೀಪ್‌ ಎಂಬುವರ ದೂರು ಆಧರಿಸಿ 3 ಜನರನ್ನು ಬಂಧಿಸಲಾಗಿದೆ. ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಿದರು.
ಮೆಕ್ಯಾನಿಕ್‌ ಅಣ್ಣಪ್ಪ ಎಂಬುವವರು ಕೆ.ಎಂ. ರಸ್ತೆಯಲ್ಲಿ ಬರುತ್ತಿದ್ದಾಗ 13 ಮಂದಿ ಅನ್ಯಕೋಮಿನ ಹುಡುಗರು ಅವರ ಮೇಲೆ ಕಲ್ಲು ತೂರಿದ್ದಾರೆ. ಅದೇ ಗುಂಪು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿ ಪೆಟ್ರೋಲ್‌ ಬಾಂಬ್‌ ಎಸೆದಿತ್ತು ಎಂದು ಹೇಳಿದರು.

ದತ್ತಪೀಠದಲ್ಲಿ ಗೋರಿ ಕಿತ್ತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಸುಮೊಟೋ ಕೇಸ್‌ ದಾಖಲು ಮಾಡಲಾಗುವುದು. ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ, ಭಾಷಣ, ಘೋಷಣೆ ಮೂಲಕ ಜನರನ್ನು ಪ್ರಚೋದಿಸಿ ಈ ಕೃತ್ಯ ನಡೆಸಲು ಅವಕಾಶ ಮಾಡಿಕೊಟ್ಟಿರುವವರ ಮೇಲೆ ಐಪಿಸಿಯ ವಿವಿಧ ಕಲಂಗಳಡಿ ಕೇಸು ದಾಖಲು ಮಾಡಲಾಗುವುದು. ಏಳೆಂಟು ಜನ ಬೇರೆ ಜಿಲ್ಲೆಯವರಾಗಿದ್ದರೆ, ಉಳಿದವರೆಲ್ಲಾ ಸ್ಥಳೀಯರೇ ಆಗಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಸೋಮವಾರ ಬೆಳಗ್ಗೆ ಹಿಂದೂ ಮತ್ತು ಮುಸಲ್ಮಾನ್‌ ಸಮುದಾಯದ ಮುಖಂಡರೊಂದಿಗೆ ಘಟನೆ ಸಂಬಂಧ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.

ಸಹಜ ಸ್ಥಿತಿಗೆ ಮರಳಿದ ಹುಣಸೂರು
ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಹಿನ್ನೆಲೆಯಲ್ಲಿ ಹುಣಸೂರು ಬಂದ್‌ ಹಿಂಪಡೆದರೂ ನಗರದಲ್ಲಿ ಸೋಮವಾರ ಮಧ್ಯಾಹ್ನದವರೆಗೆ ಅಘೋಷಿತ ಬಂದ್‌ ವಾತಾವರಣವಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಸೋಮವಾರ ಸಂಜೆ 6ಗಂಟೆ ನಂತರ ಹಿಂಪಡೆಯಲಾಯಿತು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ರಸ್ತೆಗಳಲ್ಲಿ ಹೆಚ್ಚಿನ ಜನ ಸಂಚಾರ ಕಂಡು ಬರಲಿಲ್ಲ. ಬಹುತೇಕ ಅಂಗಡಿ ಮುಂಗಟ್ಟುಗಳವರು ಸ್ವಯಂಪ್ರೇರಿತವಾಗಿ ಬಾಗಿಲು ಹಾಕಿದ್ದರು.  ಬಸ್‌ ನಿಲ್ದಾಣ ಸುತ್ತಮುತ್ತಲಿನ ಹೋಟೆಲ್‌ಗ‌ಳನ್ನು ಬಿಟ್ಟರೆ ಬಹುತೇಕ ಹೋಟೆಲ್‌ಗ‌ಳೂ ಬಾಗಿಲು ಮುಚ್ಚಿದ್ದವು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.